ಜೀವನದ ಅಡಿಪಾಯ ಪ್ರಾಥಮಿಕ ಶಿಕ್ಷಣ

Primary education is the foundation of life

ಮಹಾಲಿಂಗಪುರ: ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿ ಜೀವನದ ಅಡಿಪಾಯವಾಗಿದೆ. ಇದು ಯಶಸ್ಸಿನ ಪ್ರಮುಖ ಸಾಧನವಾಗಿದೆ ಎಂದು ಪಿಎಸ್‌ಐ ಮಧು ಎಸ್. ಹೇಳಿದರು.

ಬನಶಂಕರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ವಾರದ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಲಿದೆ. ವಿದ್ಯಾರ್ಥಿನಿಯರಿಗೆ ಯಾರಾದರೂ ತೊಂದರೆ ನೀಡಿದರೆ ಸಹಾಯವಾಣಿ 1098 ಗೆ ಕರೆ ಮಾಡಿ. ಕೂಡಲೇ ಪೊಲೀಸ್ ಸಿಬ್ಬಂದಿ ನಿಮ್ಮ ರಕ್ಷಣೆಗೆ ಧಾವಿಸುತ್ತಾರೆ ಎಂದರು.

ಪತ್ರಕರ್ತ ಜಯರಾಮ ಶೆಟ್ಟಿ, ಲಕ್ಷ್ಮಣ ಕಿಶೋರ, ನಾರನಗೌಡ ಉತ್ತಂಗಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಶೇಖರ ಅಂಗಡಿ, ಕಾನಿಪ ಅಧ್ಯಕ್ಷ ಮಹೇಶ ಮನ್ನಯ್ಯನವರಮಠ, ಎಸ್.ಎಸ್. ಈಶ್ವರಪ್ಪಗೋಳ, ಮಹೇಶ ಆರಿ, ಹಣಮಂತ ನಾವಿ, ರಂಗಣ್ಣಗೌಡ ಪಾಟೀಲ, ಅರುಣಾ ಅಂಗಡಿ, ಅರ್ಚನಾ ಕಡಪಟ್ಟಿ, ಡಾ.ಮೀನಾಕ್ಷಿ ಹುಬ್ಬಳ್ಳಿ, ರತ್ನಾ ಗೌಡರ, ಶಿವಲೀಲಾ ಹಿರೇಮಠ, ಅನ್ನಪೂರ್ಣಾ ಚಿಚಖಂಡಿ, ಮಂಜುಳಾ ನಾಶಿ, ಸುವರ್ಣಾ ಕರೆಹೊನ್ನ, ಜಯಶ್ರೀ ಹುಬ್ಬಳ್ಳಿ, ವಿಜಯಶ್ರೀ ಕುಲಕರ್ಣಿ, ಸುಧಾ ಮೂಡಲಗಿ, ಜ್ಯೋತಿ ಕಾಡೇ ಮತ್ತಿತರರಿದ್ದರು. ಜಯಶ್ರೀ ಸೋನೊನೆ ನಿರೂಪಿಸಿದರು.

Share This Article

ಬೇಸಿಗೆಯಲ್ಲಿ ಬೇಗನೆ ತೂಕ ಇಳಿಸಿಕೊಳ್ಳುವುದು ಹೇಗೆ ಗೊತ್ತಾ?  ಈ ಸುಲಭ ಸಲಹೆಗಳನ್ನು ಅನುಸರಿಸಿ…summer

summer: ತೂಕ ಇಳಿಸಿಕೊಳ್ಳುವುದು ಸುಲಭದ ಕೆಲಸವಲ್ಲ. ಕೆಲವರು ಇದಕ್ಕಾಗಿ ಆಹಾರ ಕ್ರಮದ ಜೊತೆಗೆ ವ್ಯಾಯಾಮ ಮಾಡುತ್ತಾರೆ.…

ಮದ್ವೆಯಾದ ನಂತ್ರ ಮಹಿಳೆಯರು… ಇದುವರೆಗೂ ನಾವಂದುಕೊಂಡಿದ್ದು ತಪ್ಪು, ಹೊಸ ಅಧ್ಯಯನದಲ್ಲಿ ಅಚ್ಚರಿ ಸಂಗತಿ! Marriage

Marriage : ಸಾಮಾನ್ಯವಾಗಿ ಮದುವೆಯ ನಂತರ ಮಹಿಳೆಯರ ತೂಕ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅವರು ಎಷ್ಟೇ…

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…