ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ ಹೃದಯಾಘಾತ; ಇಂದು ಮತ್ತೊಂದು ಪ್ರಕರಣ, ವಿಚಾರಣಾಧೀನ ಕೈದಿ ಸಾವು

ಶಿವಮೊಗ್ಗ: ದೇಶಾದ್ಯಂತ ಹೃದಯಾಘಾತದಿಂದ ಜನರು ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಜನರು ಕುಸಿದು ಬಿದ್ದು ಮೃತಪಟ್ಟಿರುವ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಈ ಮಧ್ಯೆ ಇವತ್ತೊಂದೇ ದಿನ ರಾಜ್ಯದಲ್ಲಿ ಇನ್ನೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆಯಷ್ಟೇ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಕಾರು ಚಾಲಕ ರವಿಕುಮಾರ್ ಎಸ್. ಕಾಳೆ ರಾಜ್ಯಪಾಲರನ್ನು ಏರ್​ಪೋರ್ಟ್​ನಿಂದ ಕರೆದುಕೊಂಡು ಬರಲು ತೆರಳಿದ್ದ ವೇಳೆ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದರು. ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೇಯ್ಟ್ ಲಿಫ್ಟಿಂಗ್ ಮುಖ್ಯ ತರಬೇತುದಾರರಾಗಿದ್ದ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿಯೂ ಕೆಲವು ವರ್ಷಗಳ ಕಾಲ … Continue reading ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ ಹೃದಯಾಘಾತ; ಇಂದು ಮತ್ತೊಂದು ಪ್ರಕರಣ, ವಿಚಾರಣಾಧೀನ ಕೈದಿ ಸಾವು