ಮೊಬೈಲ್ ವಿಚಾರದಲ್ಲಿ ಹೊಡೆದಾಡಿಕೊಂಡ ಕೈದಿಗಳು, ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

blank

ಕಾಸರಗೋಡು: ಕಾಸರಗೋಡು ಚೀಮೇನಿಯ ತೆರೆದ ಜೈಲಿನಲ್ಲಿ ಕೊಲೆ ಪ್ರಕರಣವೊಂದರ ಆರೋಪಿಗಳಿಬ್ಬರು ಮೊಬೈಲ್ ವಿಚಾರಕ್ಕೆ ಹೊಡೆದಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ಕಣ್ಣೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

blank
blank

ಪೆರ್ಲದ ಜಬ್ಬಾರ್ ಕೊಲೆ ಪ್ರಕರಣದ ಆರೋಪಿಗಳಾದ ಪಿ.ವಿ.ಅಬ್ದುಲ್ ಬಶೀರ್ ಹಾಗೂ ಮಹೇಶ್ ರೈ ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಗೊಂಡವರು. ಚೀಮೇನಿ ತೆರೆದ ಕಾರಾಗೃಹದಲ್ಲಿ ಕೈದಿ ಮಹೇಶ್‌ನಲ್ಲಿದ್ದ ಮೊಬೈಲ್ ಒಂದನ್ನು ಜೈಲು ಅಧಿಕಾರಿಗಳು ಇತ್ತೀಚೆಗೆ ವಶಕ್ಕೆ ತೆಗೆದುಕೊಂಡಿದ್ದರು. ಮೊಬೈಲ್ ತನ್ನಲ್ಲಿರುವ ಮಾಹಿತಿಯನ್ನು ಅಬ್ದುಲ್ ಬಶೀರ್ ಜೈಲು ಅಧಿಕಾರಿಗಳಿಗೆ ನೀಡಿರುವುದಾಗಿ ಆರೋಪಿಸಿ ಮಹೇಶ್ ವಾಗ್ವಾದ ಆರಂಭಿಸಿ, ನಂತರ ಇಬ್ಬರೂ ಹೊಡೆದಾಡಿಕೊಂಡಿದ್ದರು. ಇದರಿಂದ ಪಿ.ವಿ.ಅಬ್ದುಲ್ ಬಶೀರ್ ಗಾಯಗೊಂಡಿದ್ದ. ಈ ಬಗ್ಗೆ ಚೀಮೇನಿ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಇಬ್ಬರೂ ಆರೋಪಿಗಳನ್ನು ಕಣ್ಣೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

Share This Article

ಮೇಕೆ ಹಾಲು ಕುಡಿಯುವುದರಿಂದ ಆಗುವ ಅದ್ಭುತ ಪ್ರಯೋಜನಗಳೇನು ಗೊತ್ತಾ?Goat Milk Health Benefits

Goat Milk Health Benefits :  ಸಾಮಾನ್ಯವಾಗಿ ನಾವು ಹಸುವಿನ ಹಾಲು ಅಥವಾ ಎಮ್ಮೆ ಹಾಲು…

ಪೋಷಕರೇ ಹುಷಾರ್‌! ಯಾವುದೇ ಕಾರಣಕ್ಕೂ ಮಕ್ಕಳ ಮುಂದೆ ಈ 5 ವಿಚಾರ ಮಾತನಾಡಲೇಬೇಡಿ… Parents Tips

Parents Tips : ಮಕ್ಕಳಿರುವ ಮನೆ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ. ಆರು ವರ್ಷದವರೆಗೆ…

ಮಿದುಳಿನ ಆರೋಗ್ಯ ರಕ್ಷಣೆಗೆ ನಾವೇನು ಮಾಡಬೇಕು?

ಇಂದು ಕೃತಕ ಬುದ್ಧಿಮತ್ತೆ ಕೂಡ ನಮ್ಮ ಕೈಯಲ್ಲಿದೆ. ಆದರೆ ದುರದೃಷ್ಟವಶಾತ್ ನಮ್ಮ ಮಿದುಳಿನ ಆರೋಗ್ಯ ದಿನೇ…