ಕಂದಕಕ್ಕೆ ಉರುಳಿದ ಖಾಸಗಿ ಬಸ್​

blank

ಶ್ರೀನಿವಾಸಪುರ/ರಾಯಲ್ಪಾಡು: ಶ್ರೀನಿವಾಸಪುರ ತಾಲೂಕು ರಾಯಲ್ಪಾಡು ಕ್ರಾಸ್​ ಸಮೀಪ ಭಾನುವಾರ ರಾತ್ರಿ ಖಾಸಗಿ ಬಸ್​ ಕಂದಕಕ್ಕೆ ಉರುಳಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 39 ಮಂದಿಗೆ ಗಂಭೀರ ಗಾಯಗಳಾಗಿವೆ.
ಆಂಧ್ರದ ಕನಿಗಿರಿ ನಗರದ ನಿವಾಸಿ ಅನಿಲ್​ರೆಡ್ಡಿ (23) ಮೃತ.
ಬೆಂಗಳೂರಿನಿಂದ ಆಂಧ್ರ ಪ್ರದೇಶದ ಕನಿಗಿರಿ ನಗರಕ್ಕೆ ಹೋಗುತ್ತಿದ್ದ ಖಾಸಗಿ ಸ್ಲೀಪರ್​ ಕೋಚ್​ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ 40 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಮೃತ ಅನಿಲ್​ರೆಡ್ಡಿ ಮೃತದೇಹವನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಅನಿಲ್​ಕುಮಾರ್​ ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿ ಮನೆಗೆ ಹಿಂತಿರುಗುತ್ತಿದ್ದ ಎನ್ನಲಾಗಿದೆ.
39 ಗಾಯಾಳುಗಳನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಎಸ್​ಪಿ ರವಿಶಂಕರ್​, ಡಿವೈಎಸ್​ಪಿ ನಂದಕುಮಾರ್​, ಸಿಪಿಐ ಶಿವಕುಮಾರ್​, ರಾಯಲ್ಪಾಡು ಪಿಎಸ್​ಐ ಯೋಗೇಶ್​ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಯಲ್ಪಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…