More

    ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

    ಕಲಬುರಗಿ: ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

    ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್​ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ. ಇದನ್ನೂ ಓದಿರಿ ಸಚಿವ ಡಾ.ಕೆ.ಸುಧಾಕರ್​ಗೆ ಸಂಕಷ್ಟ: 1800 ಕೋಟಿ ಮೌಲ್ಯದ ಟೆಂಡರ್ ಕೇಸ್​ನಲ್ಲಿ ಹೆಸರು ತಳುಕು

    ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು ಸಾಲಗಾರರು ಶಾಲಾ ಬಸ್ ಗಳನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶಂಕರ್ ಬಿರಾದರ್ ಸಾವಿನ ಬಗ್ಗೆ ಗುರುವಾರ ಬೆಳಗ್ಗೆ ಮತ್ತೊಂದು ಖಾಸಗಿ ಶಾಲೆಯ ಮಾಲೀಕ ಬಸವರಾಜ್ ದಿಗ್ಗಾವಿ ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಅಳಲು ತೋಡಿಕೊಂಡಿದ್ದಾರೆ.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

    ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

    ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts