ಬೆಂಗಳೂರು: “ಬಿಗ್ ಬಾಸ್’ ಸೀಸನ್ 8ರಲ್ಲಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದ ನಟಿ ಪ್ರಿಯಾಂಕಾ ತಿಮ್ಮೇಶ್, ಇದೀಗ ಸದ್ದಿಲ್ಲದೆ ಹೊಸ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ಅಷ್ಟೇ ಅಲ್ಲ ಆ ಚಿತ್ರದ ಶೂಟಿಂಗ್ನಲ್ಲಿಯೂ ಅವರು ಭಾಗವಹಿಸಿದ್ದಾರೆ. ಹಾಗಾದರೆ, ಯಾವುದೀ ಸಿನಿಮಾ, ನಿರ್ದೇಶಕರ್ಯಾರು, ನಾಯಕ ಯಾರು? ಆ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.
ಈಗಾಗಲೇ “ಅಯೋಗ್ಯ’, “ರತ್ನಮಂಜರಿ’ ಸೇರಿ ಹಲವು ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರೀತಮ್ ತೆಗ್ಗಿನಮನೆ ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಇನ್ನು ಶೀಷಿರ್ಕೆ ಅಂತಿಮವಾಗದ ಈ ಚಿತ್ರದ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ನಾಯಕಿಯಾಗಿ ಕಾಣಿಸಿಕೊಂಡರೆ, “ಒಂದಲ್ಲ ಎರಡಲ್ಲ’ ಹಾಗೂ “ಇಕ್ಕಟ್’ ಖ್ಯಾತಿಯ ನಾಗಭೂಷಣ್ ನಾಯಕನಾಗಿದ್ದಾರೆ. “ಎಲ್ಲ ಭಾವನೆಗಳಿಗೆ ಈ ಚಿತ್ರದಲ್ಲಿ ಜಾಗ ಕಲ್ಪಿಸಿದ್ದೇವೆ. ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿದಿದೆ. ನವೆಂಬರ್ ವೇಳೆಗೆ ಸಿನಿಮಾ ಮುಗಿಸಿ ಶೀಷಿರ್ಕೆ ಘೋಷಿಸಲಿದ್ದೇವೆ.
ಮೊದಲ ಬಾರಿ ಪ್ರಿಯಾಂಕಾ ಮತ್ತು ನಾಗಭೂಷಣ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ಪ್ರೀತಮ್. ಇತ್ತ ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿಮಿರ್ಸುತ್ತಿರುವ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ನ ಟಿ.ಆರ್. ಚಂದ್ರಶೇಖರ್ ಚಿತ್ರ ನಿಮಿರ್ಸುತ್ತಿದ್ದಾರೆ. ನಿರ್ದೇಶನದ ಜತೆಗೆ ಛಾಯಾಗ್ರಹಣದ ಜವಾಬ್ದಾರಿಯನ್ನೂ ಪ್ರೀತಮ್ ಹೊತ್ತಿದ್ದಾರೆ.