ಕಲಬುರಗಿ: ‘ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’ ಎಂಬ ಪೋಸ್ಟರ್ ಚಿತ್ತಾಪುರ ನಗರದ ಹಲವೆಡೆ ಅಂಟಿಸಲಾಗಿದೆ.
‘ಕಳೆದ ಒಂದೂವರೆ ತಿಂಗಳಿಂದ ಪ್ರಿಯಾಂಕ್ ಖರ್ಗೆ ಅವರು ನಾಪತ್ತೆಯಾಗಿದ್ದಾರೆ. ಕ್ಷೇತ್ರದಲ್ಲಿ ಕೊನೇ ಬಾರಿಗೆ ಕಾಣಿಸಿಕೊಂಡದ್ದು ಅಕ್ಟೋಬರ್ 18. ಅಂದಿನಿಂದ ಅವರು ನಾಪತ್ತೆಯಾಗಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಎಲ್ಲಾದರೂ ಕಾಣಿಸಿಕೊಂಡರೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ತಿಳಿಸಿ’ ಎಂದು ಪೋಸ್ಟರ್ನಲ್ಲಿ ಪ್ರಕಟಿಸಲಾಗಿದೆ.
ಅಂದಹಾಗೆ ಈ ಪೋಸ್ಟರ್ ಹಾಕಿದ್ದು ಬಿಜೆಪಿ ಯುವ ಮುಖಂಡ ಅರವಿಂದ್ ಚಹ್ವಾಣ್. ಶಾಸಕರು ಕ್ಷೇತ್ರಕ್ಕೆ ಆಗಮಿಸುತ್ತಿಲ್ಲ ಎಂದು ಪೋಸ್ಟರ್ ಮೂಲಕ ಅಣಕಿಸಿದ್ದಾರೆ.
ಚಂದ್ರು ಸಾವಿನ ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತನಿಖಾ ತಂಡ ಭೇಟಿ, ವಿನಯ್ ಗುರೂಜಿಯನ್ನೂ ವಿಚಾರಣೆ ನಡೆಸಿದ ಪೊಲೀಸರು