ಬೆಂಗಳೂರು: ಪ್ರಿಯಾಂಕಾ ಉಪೇಂದ್ರ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ‘ಉಗ್ರಾವತಾರ’ ಮತ್ತು ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರಗಳನ್ನು ಮುಗಿಸಿರುವ ಅವರು ಆ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಇದಲ್ಲೆ ‘ಖೈಮರ’, ‘ಕರ್ತ ಕರ್ಮ ಕ್ರಿಯಾ’, ‘ಡಿಟೆಕ್ಟಿವ್ ತೀಕ್ಷ್ಣ’ ಮುಂತಾದ ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಮಧ್ಯೆ, ಅವರು ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ: ರಿಷಭ್ ಶೆಟ್ಟಿ ಕಂಡರೆ ಹೊಟ್ಟೆಕಿಚ್ಚಂತೆ! ಕಾಂತಾರ ಯಶಸ್ಸಿನ ಬಗ್ಗೆ ನವಾಜುದ್ದೀನ್ ಸಿದ್ದಿಖಿ ಆಡಿದ ಮಾತುಗಳಿವು…
ಪ್ರಿಯಾಂಕಾ ಉಪೇಂದ್ರ ಗ್ರೀನ್ ಸಿಗ್ನಲ್ ನೀಡಿರುವ ಹೊಸ ಚಿತ್ರದ ಹೆಸರು ‘ಪ್ರಜೆಯೇ ಪ್ರಭು’ ಎಂದು. ಹೆಸರು ಕೇಳುತ್ತಿದ್ದಂತೆಯೇ ಇದೊಂದು ಪಕ್ಕಾ ರಾಜಕೀಯ ಚಿತ್ರ ಎಂಬುದು ಸ್ಪಷ್ಟವಾಗುತ್ತದೆ. ಈ ಚಿತ್ರದಲ್ಲಿ ಪ್ರಿಯಾಂಕಾ ಮೊದಲ ಬಾರಿಗೆ ರಾಜಕಾರಣಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ರಾಜಕಾರಣಿಯಾಗಿ ಅವರು ಏನೆಲ್ಲಾ ಮಾಡುತ್ತಾರೆ ಮತ್ತು ಪ್ರಜೆಗಳಿಗೆ ಹೇಗೆ ಸ್ಪಂದಿಸುತ್ತಾರೆ ಎಂಬ ವಿಷಯ ಇನ್ನಷ್ಟೇ ಗೊತ್ತಾಗಬೇಕಿದೆ.
ಈ ಚಿತ್ರವನ್ನು ನಿರ್ದೇಶಿಸುತ್ತರುವುದು ಸಾಯಿಲಕ್ಷ್ಮಣ್. ಇದಕ್ಕೂ ಮುನ್ನ ಹಲವು ಚಿತ್ರಗಳಿಗೆ ನೃತ್ಯ ನಿರ್ದೇಶಕರಾಗಿ ದುಡಿದಿರುವ ಅವರು, ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿಯುತ್ತಿದ್ದಾರೆ. ಮೊದಲ ಚಿತ್ರದಲ್ಲೇ ಗಂಭೀರವಾದ ವಸ್ತುವೊಂದನ್ನು ಅವರು ತೆಗೆದುಕೊಂಡಿದ್ದು, ಚಿತ್ರ ಸದ್ಯದಲ್ಲೇ ಪ್ರಾರಂಭವಾಗಲಿದೆ.
ಇದನ್ನೂ ಓದಿ: ಜಪಾನ್ನಲ್ಲಿ ರಜನಿಕಾಂತ್ ಚಿತ್ರವನ್ನು ಹಿಂದಿಕ್ಕಿ ಹೊಸ ದಾಖಲೆ ಬರೆದ ‘RRR’
ಇನ್ನು, 2023ರ ಮೊದಲ ಚಿತ್ರವಾಗಿ ಪ್ರಿಯಾಂಕಾ ಉಪೇಂದ್ರ ಅಭಿನಯದ ‘ಮಿಸ್ ನಂದಿನಿ’ ಬಿಡುಗಡೆಯಾಗಲಿದೆ. ಜನವರಿ 06ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಪ್ರಚಾರದ ಕೆಲಸಗಳಲ್ಲಿ ಪ್ರಿಯಾಂಕಾ ಭಾಗವಹಿಸುವ ಸಾಧ್ಯತೆ ಇದೆ.
‘ಕಾಂತಾರ 2’ ಚಿತ್ರದ ಬಿಡುಗಡೆ ಯಾವಾಗ? ರಿಷಭ್ ಶೆಟ್ಟಿ ಹೇಳ್ತಾರೆ ಕೇಳಿ …