ಗಂಗಾವತಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಜನರಿಗೆ ಕುಡಿವ ನೀರಿನ ಸಮಸ್ಯೆ ಪರಿಹರಿಸಲು ತಾಪಂ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ ಎಂದು ತಾಪಂ ಇಒ ರಾಮರೆಡ್ಡಿ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರಿಗೆ ಕುಡಿವ ನೀರಿನ ಸಮಸ್ಯೆ ಎದುರಾಗಬಾರದು ಎಂದು ಎಚ್ಚರಿಕೆವಹಿಸಲಾಗಿದ್ದು, ನಿಯೋಜನೆಗೊಂಡ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆ ಎದುರಾದರೆ ಸಹಾಯವಾಣಿ ಕೇಂದ್ರಕ್ಕೆ ಸಂಪರ್ಕಿಸಬಹುದು.
ಮಾಹಿತಿಗೆ ಎಂ.ಸಂತೋಷ (6361940327) ಇವರಿಗೆ ಬೆಳಗ್ಗೆ 9 ರಿಂದ ಮಧ್ಯಹ್ನ 1.30 ರವರೆಗೆ, ಯಮನೂರಪ್ಪ ( 8197895571) ಇವರಿಗೆ ಮಧ್ಯಾಹ್ನ 1ರಿಂದ ಸಂಜೆ 7.30 ರವರೆಗೆ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತಿಳಿಸಿದ್ದಾರೆ.