More

    ಸಿನಿಮಾ ಗೆದ್ದಿದೆ ಆ ಖುಷಿಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ; ದರ್ಶನ್​ ಹೇಳಿಕೆಗೆ ಉಮಾಪತಿ ಟಾಂಗ್​

    ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಕಾಟೇರ ಚಿತ್ರವು ಯಶಸ್ವಿಯಾಗಿ 50ನೇ ದಿನ ಪೂರೈಸಿದ ಬೆನ್ನಲ್ಲೇ ಚಿತ್ರತಂಡದ ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆಯನ್ನು ಆಯೋಜಿಸಿತ್ತು. ಇನ್ನು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ನಟ ದರ್ಶನ್​ ತಮ್ಮ ಮಾಜಿ ಗೆಳೆಯ ಉಮಾಪತಿಗೆ ತಮ್ಮ ಮಾತಿನ ಮೂಲಕ ಚಾಟಿ ಬೀಸಿದ್ದರು.

    ಇನ್ನು ದರ್ಶನ್​ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಉಮಾಪತಿ ಅವರೆಲ್ಲಾ ದೊಡ್ಡವರು, ನಾವು ಚಿಕ್ಕವರು ಬಿಡಿ ಹೇಳಿಕೊಂಡು ಓಡಾಲಿ ಬಿಡಿ. ದರ್ಶನ್ ಅವರನ್ನು ಎದುರು ಹಾಕಿಕೊಂಡು ಬದುಕೋಕೆ ಆಗುತ್ತಾ ಎಂದು ಹೇಳಿದ್ದಾರೆ.

    ಅವರಿಗೆ ಉತ್ತರ ಕೊಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ನಾವೆಲ್ಲ ತಗಡುಗಳು ತಗಡುಗಳಾಗೇ ಇರಬೇಕಲ್ವ ರಾಬರ್ಟ್ ಸಿನಿಮಾ ಅವರದ್ದೇ, ಅವರೇ ಕತೆ ಕೊಟ್ಟರು ದುಡ್ಡು ಅವರೇ ಹಾಕಿದರು. ನಿರ್ಮಾಪಕನೂ ನಾನಲ್ಲ, ನಾನು ಡಮ್ಮಿ ನಿರ್ಮಾಪಕ ಆಗಿದ್ದೆ. ಅವರೆಲ್ಲ ದೊಡ್ಡ ವ್ಯಕ್ತಿಗಳು, ಮಾತನಾಡಿದ್ದಾರೆ, ಮಾತನಾಡಲಿ ಬಿಡಿ.

    Darshan Umapathy

    ಇದನ್ನೂ ಓದಿ: “ಕೊಟ್ಟಿದ್ದು ಮಾಡಿದ್ದು ಹೇಳಬಾರದು…”: ಕಾಟೇರ ಚಿತ್ರದ ಕಥೆ ಬಗ್ಗೆ ಮಾತನಾಡಿದ ನಿರ್ಮಾಪಕ ಉಮಾಪತಿ ಗೌಡಗೆ ಡಿ ಬಾಸ್ ಪಂಚ್

    ಕಾಟೇರ ರಿಜಿಸ್ಟರ್ ಮಾಡಿದ್ದೆ ನಾನು ಮದಗಜ ಸಮಯದಲ್ಲಿ ಎಲ್ಲರೂ ನನ್ನ ಮಿಸ್ ಲೀಡ್ ಮಾಡಿಬಿಟ್ಟರು. ಸಮಯ ಬಂದಾಗ ಎಲ್ಲದ್ದಕ್ಕೂ ನಾನು ಉತ್ತರ ಕೊಡುತ್ತೇನೆ. ನಾನು ಒಂದು ಜವಾಬ್ದಾರಿಯುತ ಸಮುದಾಯದ ನಾಯಕ. ನನ್ನನ್ನು ಇಲ್ಲಿಯವರೆಗೂ ಜನ ಬೆಳೆಸಿದ್ದಾರೆ. ಕಾಟೇರ ಟೈಟಲ್ ಯಾರ ಬ್ಯಾನರ್ ಅಲ್ಲಿ ರಿಜಿಸ್ಟರ್ ಆಯ್ತು ಎಂಬುದು ಚೇಂಬರ್​ನಲ್ಲಿ ಮಾಹಿತಿ ಸಿಗುತ್ತದೆ. ಅವರು ಹೆಸರು ರೆಫರ್ ಮಾಡಿದ್ದರು, ರಿಜಿಸ್ಟರ್ ಮಾಡಿಟ್ಟುಕೊಂಡಿದ್ದೆ, ಮದಗಜ ಸಿನಿಮಾ ಟೈಟಲ್ ರಾಮಮೂರ್ತಿ ಅವರ ಬಳಿ ಇತ್ತು, ಕೊಡ್ತೀನಿ ಅನ್ನೋ ಒಪ್ಪಂದದ ಮೇಲೆ ಕಾಟೇರ ಟೈಟಲ್ ಕೊಟ್ಟೆ ಎಂದಿದ್ದಾರೆ.

    ಕಾಟೇರ ಕತೆಯ ವಿಚಾರ ಮಾತನಾಡಿ, ರಾಬರ್ಟ್​ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಕಾಟೇರ ಸಿನಿಮಾದ ಕತೆಯನ್ನು ನಾನು ಮಾಡಿಸಿದ್ದೆ. ಎಲ್ಲರೂ ಒಟ್ಟಿಗೆ ಸೇರಿ ಡಿಸ್ಕಸ್ ಮಾಡಿ ಕತೆ ಮಾಡಿದೆವು. ಈಗ ಆ ಸಿನಿಮಾದ ನಿರ್ದೇಶಕರು ಅವರ ಕಡೆ ಇದ್ದಾರೆ. ನಿರ್ಮಾಪಕರು ಸಿನಿಮಾ ನಿರ್ಮಾಣ ಮಾಡಿದ್ದಾರೆ, ಇವರು (ದರ್ಶನ್) ಆ್ಯಕ್ಟ್​ ಮಾಡಿದ್ದಾರೆ, ಸಿನಿಮಾ ಗೆದ್ದಿದೆ. ಆ ಖುಷಿಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ. ನನ್ನ ಅಕ್ಕಪಕ್ಕ ಇರೋರು ನಾನು ಹೇಳಿದ್ದು ಸರಿ ಅಂತರೆ, ಹಾಗೆಯೇ ಅವರ ಅಕ್ಕ-ಪಕ್ಕ ಇರೋರು ಅವರು ಹೇಳಿದ್ದು ಸರಿ ಅಂತಾರೆ. ಮೇಲಿರುವ ಭಗವಂತನ ಬಳಿ ಎಲ್ಲದಕ್ಕೂ ಲೆಕ್ಕ ಇದೆ. ನಾವೆಲ್ಲ ತಗಡುಗಳು ಅಷ್ಟೇ ಎಂದಿದ್ದಾರೆ.

    ಕೆಲವರು ಕಥೆ ನಾನು ಮಾಡಿಸಿದೆ. ಟೈಟಲ್ ನಾನು ಕೊಟ್ಟೆ ಅಂತ ಹೇಳುತ್ತಿದ್ದಾರೆ. ಅಯ್ಯೋ ತಗಡೇ. ನಿನಗೆ ‘ರಾಬರ್ಟ್’ ಕಥೆ ಕೊಟ್ಟದ್ದೇ ನಾವು. ಕೊಟ್ಟಿದ್ದು ಮಾಡಿದ್ದು ಹೇಳಬಾರದು. ಇದೇ ರೀತಿ ಒಂದ್ಸಲ ಸಿಕ್ಕಿಹಾಕಿಕೊಂಡು ಹೇಳಿಸಿಕೊಂಡು ಬುದ್ದಿ ಕಲಿಯಲಿಲ್ಲ ಅಂದ್ರೆ ನಾವು ಏನು ಹೇಳೋಣ. ಇಂತಹ ಒಳ್ಳೆಯ ಕಥೆ ಯಾಕಪ್ಪಾ ಬಿಟ್ಟೆ ನೀನು. ನೀನು ಕಥೆ ಮಾಡಿಸಿದೆ ಅಲ್ವಾ? ಹಾಗಾದರೆ ಇಂತಹ ಒಳ್ಳೆ ಕಥೆ ಯಾಕೆ ಬಿಟ್ಟೆ? ನಿನ್ನ ಜಡ್ಜ್‌ಮೆಂಟ್ ಅಷ್ಟು ಚೆನ್ನಾಗಿದೆ ಗುಡ್. ನೀನು ಮಾಡಬಹುದಿತ್ತಲ್ಲ. ಟೈಟಲ್ ನಾನು ಕೊಟ್ಟೆ ಎನ್ನುತ್ತೀಯಾ. ‘ಕಾಟೇರ’ ಟೈಟಲ್ ಕೊಟ್ಟಿದ್ದು ನಾನು. ಅದಕ್ಕೂ ಸ್ಪಷ್ಟನೆ ಕೊಡುತ್ತೀನಿ. ಎಲ್ಲಾ ಆಧಾರ ಇಟ್ಟುಕೊಂಡು ಮಾತನಾಡಬೇಕು ಎಂದು ನಟ ದರ್ಶನ್​ ಉಮಾಪತಿಗೆ ವೇದಿಕೆ ಮೇಲೆ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts