blank

ವೃತ್ತಿಪರ ಹಾಸ್ಟೆಲ್ ಆರಂಭಿಸಲು ಆಗ್ರಹ: ಗಂಗಾವತಿಯಲ್ಲಿ ಎಸ್‌ಎಫ್‌ಐ ಪ್ರತಿಭಟನೆ

blank

ಗಂಗಾವತಿ: ವೃತ್ತಿಪರ ಹಾಸ್ಟೆಲ್‌ಗಳ ಆರಂಭಕ್ಕೆ ಸರ್ಕಾರ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಗುರುವಾರ ನಗರದ ತಾಲೂಕಾಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಅನಂತ ಜೋಶಿಗೆ ಮನವಿ ಸಲ್ಲಿಸಿದರು.

ಸಮಿತಿ ಅಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ವೃತ್ತಿಪರ ಕೋರ್ಸ್ ಕಲಿಯುವ ಉದ್ದೇಶದಿಂದ ಗ್ರಾಮೀಣ ಭಾಗದಿಂದ ನೂರಾರು ವಿದ್ಯಾರ್ಥಿಗಳು ನಗರಕ್ಕೆ ಬರುತ್ತಿದ್ದು, ನರ್ಸಿಂಗ್, ಐಟಿಐ, ಇಂಜಿನಿಯರಿಂಗ್, ಾರ್ಮಸಿ, ಕಾನೂನು ಮತ್ತು ಬಿಇಡಿ ಕೋರ್ಸ್‌ಗಳತ್ತ ಗಮನಹರಿಸಿದ್ದಾರೆ. ಆದರೆ, ವೃತ್ತಿಪರ ಹಾಸ್ಟೆಲ್‌ಗಳ ಕೊರತೆಯಿಂದ ದುಬಾರಿ ಶುಲ್ಕದ ಪಿಜಿ(ಪೇಯಿಂಗ್ ಗೆಸ್ಟ್)ಯಲ್ಲಿ ಉಳಿಯುವ ಸ್ಥಿತಿ ಬಂದಿದೆ. ಮಾಸಿಕ ಕನಿಷ್ಠ 5ಸಾವಿರ ರೂ.ವೆಚ್ಚವಾಗುತ್ತಿದ್ದು, ಅಧ್ಯಯನ ಶುಲ್ಕಕ್ಕಿಂತ ಹೆಚ್ಚಿನ ಹಣ ವ್ಯಯಿಸಬೇಕಿದೆ. ಬಡ ಕುಟುಂಬದಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ವೃತ್ತಿಪರ ಕೋರ್ಸ್‌ಗಳ ಹಾಸ್ಟೆಲ್‌ಗಳ ಮಂಜೂರಾತಿಗೆ ಸರ್ಕಾರ ಗಮನಹರಿಸಿ ಬಜೆಟ್‌ನಲ್ಲಿ ೋಷಿಸಬೇಕು ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ಶಿವಕುಮಾರ, ರಾಜಭಕ್ಷಿ, ಶಂಕರ, ಜಾವೇದ್, ಹರ್ಷಿತ್ ಗೌಡ, ಮನೋಜಕುಮಾರ, ಸೈಯದ್ ಮೆಹಬೂಬ್,ಆದರ್ಶ ದೇಸಾಯಿ, ರುದ್ರೇಶ, ವಿನಾಯಕ, ಅನಿಕೇತ, ಮಂಜುನಾಥ ಇತರರಿದ್ದರು.

Share This Article

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…

ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango

ಬೆಂಗಳೂರು: ( Mango ) ಬೇಸಿಗೆಯಲ್ಲಿ  ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…