ಸಾಂಪ್ರದಾಯಿಕ ಕೃಷಿಯಿಂದ ಲಾಭ ಗಳಿಕೆ

blank

ಕುಂದಾಪುರ: ಸೂಕ್ತ ಕ್ರಮದಲ್ಲಿ ಕೃಷಿ ಮಾಡಿದರೆ ನಷ್ಟವಾಗುವುದಿಲ್ಲ. ಆದರೆ ಸರಿಯಾದ ಅಧ್ಯಯನ ನಡೆಸಿರಬೇಕು. ಸಾಂಪ್ರದಾಯಿಕ, ವೈಜ್ಞಾನಿಕ ಕೃಷಿಯಿಂದ ಖಂಡಿತ ಲಾಭ ಗಳಿಸಲು ಸಾಧ್ಯವಿದೆ ಎಂದು ಜಿಲ್ಲಾ ಸಾಧಕ ರೈತ ಪ್ರಶಸ್ತಿ ಪುರಸ್ಕೃತ ಕೃಷಿಕ ರಮೇಶ್ ನಾಯಕ್ ಹೇಳಿದರು.

ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗೂ ಭಾರತೀಯ ಕಿಸಾನ್ ಸಂಘ ಸಹಯೋಗದಲ್ಲಿ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾ ಮಂದಿರದಲ್ಲಿ ಭಾನುವಾರ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಸಿದ್ದಾಪುರ ವಲಯ ಅರಣ್ಯಾಧಿಕಾರಿ ಗಣಪತಿ ವಿ.ನಾಯಕ್ ಅರಣ್ಯ ಕೃಷಿ ಬಗ್ಗೆ, ಗ್ರೀನ್ ಇಂಡಿಯಾ ಸ್ಥಾಪಕಾಧ್ಯಕ್ಷ ಮುನಿಯಾಲು ಗಣೇಶ್ ಶೆಣೈ ಅಣಬೆ ಕೃಷಿ ಬಗ್ಗೆ, ಕೃಷ್ಣಪ್ಪ ಗೌಡ ಪಡ್ಡಂಬೈಲು ತಾರಸಿ ಕೃಷಿ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ಮಾಜಿ ಅಧ್ಯಕ್ಷ ಡಾ.ಉತ್ತಮ್ ಕುಮಾರ್ ಶೆಟ್ಟಿ, ಕ್ಲಬ್‌ನ ಪ್ರಮುಖರು, ಸದಸ್ಯರು, ಭಾರತೀಯ ಕಿಸಾನ್ ಸಂಘ ಕುಂದಾಪುರದ ಪದಾಧಿಕಾರಿಗಳು, ರೈತರು ಉಪಸ್ಥಿತರಿದ್ದರು. ಜುಡಿತ್ ಮೆಂಡೋನ್ಸಾ ಕಾರ‌್ಯಕ್ರಮ ನಿರೂಪಿಸಿದರು.

ಕಟ್ಟಡ ಕಾರ್ಮಿಕರಿಂದ ಸಂಭ್ರಮಾಚರಣೆ

Share This Article

ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…

ಪ್ರತಿದಿನ 1 ದಾಳಿಂಬೆ ಸೇವನೆಯಿಂದಾಗುವ ಪ್ರಯೋಜನಗಳಿವು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ದಾಳಿಂಬೆ ಪೋಷಕಾಂಶಗಳಿಂದ ತುಂಬಿದೆ ಎಂಬುದು ಮುಚ್ಚಿಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪ್ರತಿಯೊಬ್ಬರೂ ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಲು…

ಧೂಮಪಾನ ಬಿಡಲು ಮನಸ್ಸಿದ್ದರೂ ಸಾಧ್ಯವಾಗುತ್ತಿಲ್ಲವೇ?; ನಿಮಗಾಗಿಯೇ ಈ ಟ್ರಿಕ್ಸ್​ | Health Tips

ಪ್ರತ್ಯಕ್ಷವಾಗೋ ಅಥವಾ ಪರೋಕ್ಷವಾಗೋ ನಾವೆಲ್ಲರೂ ನಿಷ್ಕ್ರಿಯ ಧೂಮಪಾನಿಗಳು. ಏಕೆಂದರೆ ನಮ್ಮ ಸುತ್ತಲೂ ಯಾವಾಗಲೂ ಯಾರಾದರೂ ಸಿಗರೇಟ್…