More

    ಒಗ್ಗಟ್ಟಿನಿಂದ ಮಾತ್ರ ದೇಶದ ಪ್ರಗತಿ ಸಾಧ್ಯ

    ಬಾಳೆಹೊನ್ನೂರು: ಭಾರತೀಯರು ಒಗಟ್ಟಿನಲ್ಲಿ ಇದ್ದಲ್ಲಿ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ರಂಭಾಪುರಿ ಪೀಠದ ಲೆಕ್ಕಾಧಿಕಾರಿ ಸಂಕಪ್ಪ ಹೇಳಿದರು.
    ರೇಣುಕನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ 75ನೇ ಗಣರಾಜ್ಯೋತ್ಸವವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಸಂವಿಧಾನ ಜಾರಿಗೆ ಬಂದ ಮಹತ್ವದ ದಿನವನ್ನು ನಾವು ಗಣರಾಜ್ಯೋತ್ಸವವಾಗಿ ಆಚರಿಸುತ್ತಿದ್ದೇವೆ. ಅಂಬೇಡ್ಕರ್ ನಮಗೆ ಕೊಟ್ಟಿರುವ ಸಂವಿಧಾನ ವಿಶ್ವ ಶ್ರೇಷ್ಟ ಸಂವಿಧಾನವಾಗಿದೆ. ಸುಭಾಷ ಚಂದ್ರ ಬೋಸ್ ಅವರ ದೇಶಭಕ್ತಿಯನ್ನು ಇಂದಿನ ಯುವಕರು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಯುವಕರು ನಮ್ಮ ಭವ್ಯ ಭಾರತದ ಇತಿಹಾಸ ಚೆನ್ನಾಗಿ ಅರಿತುಕೊಂಡು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು ಎಂದರು.
    ಪ್ರಾಚಾರ್ಯ ಎಚ್.ಆರ್.ಆನಂದ್ ಮಾತನಾಡಿ, ಗಣರಾಜ್ಯೋತ್ಸವದ ದಿನ ನಮ್ಮ ಬಲಿಷ್ಠ ಭಾರತದ ಹಬ್ಬವಾಗಿದೆ. ಸಂವಿಧಾನ, ನಮ್ಮ ರಾಷ್ಟ್ರ ಧ್ವಜದ ಬಗ್ಗೆ ಇಂದಿನ ಯುವಕರು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳನ್ನು ತಪ್ಪು ದಾರಿಗೆ ಸೆಳೆಯುತ್ತಿರುವ ಮಾದಕ ವಸ್ತುಗಳ ಜಾಹೀರಾತು ನೀಡುವ ಸಿನಿಮಾಗಳ ನಟ, ನಟಿಯರು ನಮ್ಮ ಯುವಕರಿಗೆ ಆದರ್ಶವಾಗುತ್ತಿರುವುದು ವಿಷಾದನೀಯ. ನಮ್ಮ ದೇಶ ಎಲ್ಲ ರಂಗಗಳಲ್ಲಿ ಬಲಿಷ್ಠ ದೇಶವಾಗಿ ಪರಿವರ್ತನೆಯಾಗುತ್ತಿರುವ ಈ ಸುವರ್ಣ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯಕ್ಕಾಗಿ ದೇಶಭಕ್ತಿ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts