More

    ಪ್ರಾಮಿಸ್ಡ್​ ನೇಷನ್​ ಪ್ರಧಾನಿ ನರೇಂದ್ರ ಮೋದಿಗೆ ಅರ್ಪಣೆ: ವಿಆರ್​ಎಲ್​ ಸಮೂಹ ಸಂಸ್ಥೆ ನೇತೃತ್ವದಲ್ಲಿ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ

    ಬೆಂಗಳೂರು: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷವಿದ್ದವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ವಿಆರ್​ಎಲ್​ ಸಮೂಹ ಸಂಸ್ಥೆ ನೇತೃತ್ವದಲ್ಲಿ ಹುಬ್ಬಳ್ಳಿ ಮೂಲದ ಟೀಮ್​ ಸೆನ್ಸ್​ ಎಸೆನ್ಸ್​ ಸಂಸ್ಥೆಯು ಬ್ರೈಲ್​ ಲಿಪಿಯಲ್ಲಿ ಸಿದ್ಧಪಡಿಸಿದ “ಎ ಪ್ರಾಮಿಸ್ಡ್​ ನೇಷನ್​ ಹಾನರೇಬಲ್​ ಶ್ರೀ ನರೇಂದ್ರ ಮೋದಿ – ದ ಮೇಕರ್​ ಆಫ್​ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಇತ್ತೀಚೆಗೆ ಪ್ರಧಾನಿಯವರಿಗೆ ಅರ್ಪಿಸಲಾಯಿತು.

    ಸೆನ್ಸ್​ ಎಸೆನ್ಸ್​ ಸಂಸ್ಥೆಯ ರುಷಾಲಿ ಭಂಡಾರಿ ಮತ್ತು ಯಶ್ವಿ ಭಂಡಾರಿ ಅವರು ಅತ್ಯಂತ ಕಾಳಜಿಯಿಂದ ಸಿದ್ಧಪಡಿಸಿದ ಈ ವಿಶೇಷ ಪುಸ್ತಕವನ್ನು ವಿಆರ್​ಎಲ್​ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಹೊರತರಲಾಗಿದೆ. ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು.

    ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ವಿಆರ್​ಎಲ್​ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ, ಶ್ರೀಮತಿ ವಾಣಿ ಆನಂದ ಸಂಕೇಶ್ವರ, ರುಷಾಲಿ, ಯಶ್ವಿ ಅವರು ಪುಸ್ತಕದ ಐದು ಪ್ರತಿಗಳನ್ನು ಅರ್ಪಿಸಿದರು.

    ಪುಸ್ತಕದ ಮುಖಪುಟ ವೀಕ್ಷಿಸಿ, ಒಳಪುಟಗಳನ್ನು ತಿರುವಿ ಹಾಕುತ್ತ ಅತ್ಯಂತ ಆಸಕ್ತಿಯಿಂದ ವಿವರಗಳನ್ನು ಕೇಳಿ ತಿಳಿದುಕೊಂಡ ಮೋದಿಯವರು, ಇದೊಂದು ವಿಶಿಷ್ಟ ಕೃತಿಯಾಗಿದೆ. ನಿಜಕ್ಕೂ ವಿಶೇಷ ಸಾಧನೆ ಮಾಡಿದ್ದೀರಿ ಎಂದು ಪ್ರಶಂಸಿಸಿದರು. ವಿಆರ್​ಎಲ್​ ಸಮೂಹ ಸಂಸ್ಥೆಯ ಬೆಂಬಲದಿಂದ ಪುಸ್ತಕ ಹೊರತರಲು ಸಾಧ್ಯವಾಯಿತು. ಇದನ್ನು ಅಂಧರ ಶಾಲೆಗಳಿಗೆ ತಲುಪಿಸಲಾಗಿದೆ. ಆಸಕ್ತ ಅಂಧರಿಗೆ ಲಭಿಸುವಂತೆ ಮಾಡಲಾಗಿದೆ. ನಮ್ಮ ದೇಶ ಮಾತ್ರವಲ್ಲ, ಅನ್ಯ ದೇಶಗಳ ಅಂಧರೂ ಮೋದಿ ಯವರ ಸಾಧನೆಗಳನ್ನು ತಿಳಿದುಕೊಳ್ಳಲು ಸಹಾಯ ಮಾಡುವ ಆಸೆಯಿದ್ದು, ವಿವಿಧ ದೇಶಗಳಿಗೆ ಪುಸ್ತಕವನ್ನು ತಲುಪಿಸುವ ಗುರಿ ಹೊಂದಿದ್ದೇವೆ ಎಂದು ರುಷಾಲಿ ಮತ್ತು ಯಶ್ವಿ ವಿವರಿಸಿದರು. ನಿಮ್ಮ ಗುರಿ ವಿಶಾಲವಾಗಿದೆ. ವಿಆರ್​ಎಲ್​ ಸಮೂಹ ಸಂಸ್ಥೆ ಇಂತಹ ಒಳ್ಳೆಯ ಪ್ರಯತ್ನವನ್ನು ಬೆಂಬಲಿಸಿ ಯಶಸ್ವಿ ಗೊಳಿಸಿರುವುದು ಅಭಿನಂದನಾರ್ಹ ಎಂದು ಪ್ರಧಾನಿ ಹೇಳಿದರು.

    ಪ್ರಾಮಿಸ್ಡ್​ ನೇಷನ್​ ಪ್ರಧಾನಿ ನರೇಂದ್ರ ಮೋದಿಗೆ ಅರ್ಪಣೆ: ವಿಆರ್​ಎಲ್​ ಸಮೂಹ ಸಂಸ್ಥೆ ನೇತೃತ್ವದಲ್ಲಿ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ

    ಡಾ. ಆನಂದ ಸಂಕೇಶ್ವರ ಅವರ ಕಾಳಜಿಯನ್ನು ಇದೇ ವೇಳೆ ಪ್ರಶಂಸಿಸಿದ ಮೋದಿಯವರು, ಬೇರೆ ಬೇರೆ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಲು ಪ್ರೋತ್ಸಾಹ ನೀಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಕುರಿತ ಈ ಪುಸ್ತಕವನ್ನು ಕೇಂದ್ರ ಗೃಹಮಂತ್ರಿ ಅಮಿತ್​ ಷಾ ಅವರು ಕಳೆದ ಜನವರಿಯಲ್ಲಿ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದರು.

    ಉಷಾ ಕೃಷ್ಣಗೆ ಪುಸ್ತಕ ಕೊಡುಗೆ
    ಜೀವನದಲ್ಲಿ ಒಮ್ಮೆಯಾದರೂ ಮೋದಿ ಅವರನ್ನು ಭೇಟಿ ಮಾಡಬೇಕೆಂದು ಹಂಬಲಿಸುತ್ತಿದ್ದ ಬೆಂಗಳೂರಿನ ಉಷಾ ಕೃಷ್ಣ ಅವರ ಕನಸು ಮೊನ್ನೆ ಈಡೇರಿತು. ಶೇ.99 ದೃಷ್ಟಿದೋಷ ಇರುವ ಉಷಾ ಅವರೊಂದಿಗೆ ಮಾತನಾಡುತ್ತಲೇ ಪ್ರಧಾನಿ ಮೋದಿ ವಿಮಾನದಿಂದ “ಎ ಪ್ರಾಮಿಸ್ಡ್​ ನೇಷನ್​’ ಬೆಲ್​ ಪುಸ್ತಕವನ್ನು ತರಿಸಿ ಹಸ್ತಾಂತರಿಸಿ ವಿಆರ್​ಎಲ್​ ಸಂಸ್ಥೆಯ ಶ್ರಮ ತಮಗೆ ಸಹಾಯವಾಗಲಿ ಎಂದು ಶುಭ ಹಾರೈಸಿದ್ದಾರೆ.

    ನಮೋ ನಾಯಕತ್ವದಲ್ಲಿ ಭಾರತ ಉತ್ತುಂಗಕ್ಕೆ
    ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕತ್ವದಲ್ಲಿ ದೇಶವನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿರುವುದರಿಂದ, ದೇಶದ ಅನೇಕರಿಗೆ ಅವರು ಪ್ರೇರಣಾದಾಯಿಯಾಗಿದ್ದಾರೆ. ಹೀಗಾಗಿ, ಈ ಸಾಧಕ ಪ್ರಧಾನಿ ಬಗ್ಗೆ ಅಂಧ ಮಕ್ಕಳೂ ತಿಳಿದುಕೊಳ್ಳು ವಂತಾಗಬೇಕು ಎಂಬ ಉದ್ದೇಶದಿಂದ ಈ ಪುಸ್ತಕ ಸಿದ್ಧಪಡಿಸಲು ಹಲವು ತಿಂಗಳು ಶ್ರಮಿಸಿದ್ದೇವೆ. ನಮ್ಮನ್ನು ಪ್ರೋತ್ಸಾಹಿಸಿದ ವಿಆರ್​ಎಲ್​ ಸಂಸ್ಥೆಯ ಎಂಡಿ ಡಾ. ಆನಂದ ಸಂಕೇಶ್ವರ ಅವರಿಗೂ ನಾವು ಆಭಾರಿಯಾಗಿದ್ದೇವೆ ಎಂದು ರುಷಾಲಿ ಭಂಡಾರಿ ಮತ್ತು ಯಶ್ವಿ ಭಂಡಾರಿ ಹೇಳಿದ್ದಾರೆ.

    ಅಂಧರಿಗಾಗಿ ಶ್ರಮಿಸಬೇಕೆಂಬ ಉದ್ದೇಶ
    ರುಷಾಲಿ ಭಂಡಾರಿ ಮತ್ತು ಯಶ್ವಿ ಭಂಡಾರಿ 2019ರಲ್ಲಿ ಸೆನ್ಸ್​ ಎಸೆನ್ಸ್​ ಸಂಸ್ಥೆ ಹುಟ್ಟುಹಾಕಿದರು. ಕರೊನಾ ಕಾಲದಲ್ಲಿ ದೃಷ್ಟಿ ದೋಷವುಳ್ಳವರ ಸಲುವಾಗಿ ಕೆಲಸ ಮಾಡಲು ಶುರು ಮಾಡಿದ್ದರು. ಈಗಾಗಲೇ, “ಲವ್​ ಯುವರ್​ ಐಸ್​’ (Love Your Eyes) ಮೂಲಕ ರೈಲ್ವೆ ನಿಲ್ದಾಣಗಳಲ್ಲಿ ದೃಷ್ಟಿ ದೋಷವಿದ್ದವರ ನೆರವಿಗೆ ಧಾವಿಸಿದ್ದಾರೆ. ಸ್ಪರ್ಶಾನದಿಂದ ತಿಳಿಯಬಹುದಾದ ಮ್ಯಾಪ್​, ಬೆಲ್​ ಸೈನ್​ ಬೋರ್ಡ್​ಗಳನ್ನೊಳಗೊಂಡಿರುವ ಪುಸ್ತಕ ಇದಾಗಿದ್ದು, ಧಾರವಾಡ ಮತ್ತು ಬೆಳಗಾವಿ ರೈಲ್ವೆ ನಿಲ್ದಾಣಗಳಲ್ಲಿ ಕಾಣಬಹುದಾಗಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರು 2022ರ ಅಕ್ಟೋಬರ್​ನಲ್ಲಿ ಬಿಡುಗಡೆಗೊಳಿಸಿದ್ದರು.

    ವಿಆರ್​ಎಲ್​ ಲಾಜಿಸ್ಟಿಕ್​ ಲಿ. ವತಿಯಿಂದ ಕಾಪೋರ್ರೇಟ್​ ಸಾಮಾಜಿಕ ಜವಾಬ್ದಾರಿ (ಸಿಎಸ್​ಆರ್​) ಅಡಿಯಲ್ಲಿ ನಾವು ಆರೋಗ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರಗಳಲ್ಲಿ ಹಲವು ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಗೆ ಪ್ರಯತ್ನಿಸಿದ್ದೇವೆ. ಈ ಕೆಲಸಗಳ ಸಕಾರಾತ್ಮಕ ಪರಿಣಾಮಗಳ ಬಗ್ಗೆ ನಮಗೆ ಹೆಮ್ಮೆಯಿದೆ. ಸಮಾಜದ ಎಲ್ಲರ ಏಳಿಗೆಗೆ ಪೂರಕವಾಗಿ ನಮ್ಮ ಪ್ರಯತ್ನಗಳನ್ನು ಮುಂದುವರಿಸುತ್ತಲೇ ಇರುತ್ತೇವೆ. ಪ್ರಧಾನಿ ಅವರ ಜೀವನ ಸಾಧನೆ ಮತ್ತು ಅವರ ಕೈಂಕರ್ಯಗಳು ಅಂಧರಿಗೂ ಪ್ರೇರಣೆ ಆಗಲಿ ಎನ್ನುವ ಸದುದ್ದೇಶದಿಂದ ಈ ಪುಸ್ತಕ ಪ್ರಕಟಿಸಲು ನೆರವಾಗಿದ್ದೇವೆ. ಪುಸ್ತಕವು ದೇಶದ ಕೋಟ್ಯಂತರ ದೃಷ್ಟಿ ದೋಷವುಳ್ಳವರಿಗೆ ನೆರವಾಗಬಹುದು ಎಂಬುದು ನಮ್ಮ ಭಾವನೆ.

    | ಡಾ. ಆನಂದ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕರು, ವಿಆರ್​ಎಲ್​ ಸಮೂಹ ಸಂಸ್ಥೆ

    ಸಾವಿನ ಹೊಸ್ತಿಲಲ್ಲಿದ್ದ ಪಾಕ್​ ಯುವತಿಯ ಜೀವ ಉಳಿಸಿತು ಭಾರತೀಯನ ಹೃದಯ! ಮಾನವೀಯತೆ ಅಂದ್ರೆ ಇದು ಅಂದ್ರು ನೆಟ್ಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts