ಆಶ್ವಾಸನೆ ಕೊಟ್ಟರೂ ಕಾರ್ಯರೂಪಕ್ಕೆ ಬಂದಿಲ್ಲ: ರಾಜ್ಯ ಗುತ್ತಿಗೆದಾರರ ಸಂಘದಿಂದ ಸಿಎಂಗೆ ಪತ್ರ

blank

ಬೆಂಗಳೂರು:ಗುತ್ತಿಗೆದಾರರ ಬಾಕಿ ಇರುವ ಬಿಲ್​ಗಳಿಗೆ ಶೇ.50 ಹಣ ಬಿಡಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಆಶ್ವಾಸನೆ ಕೊಟ್ಟು ಎರಡು ತಿಂಗಳು ಕಳೆದರೂ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘ ಬೇಸರ ವ್ಯಕ್ತಪಡಿಸಿದೆ.

blank

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಆರ್​. ಮಂಜುನಾಥ್​, 2025ರ ಮಾ.3ರಂದು ನಿಮ್ಮನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಬಾಕಿ ಇರುವ ಬಿಲ್​ಗಳಿಗೆ ಶೇ.50 ಹಣ ಬಿಡುಗಡೆ ಮಾಡುತ್ತೇವೆ ಎಂದು ಸಂಘದ ಪದಾಧಿಕಾರಿಗಳಿಗೆ ಭರವಸೆ ಕೊಟ್ಟಿದ್ದೀರಿ. ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರು ಅಂದಾಜು 3 ವರ್ಷಗಳಿಂದ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಈಡೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತೀರಿ. ಆದರೆ, ಈವರೆಗೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಹೇಳಿದರು.

2ನೇ ಬಾರಿಗೆ ಯಶಸ್ವಿಯಾಗಿ ನೀವು ಸಿಎಂ ಕಾರ್ಯನಿರ್ವಹಿಸುತ್ತಿರುವುದು ಗಮನಾರ್ಹ.ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಗಹರಿಸುವುದು ಆದ್ಯ ಕರ್ತವ್ಯ. ಈ ವಿಚಾರವಾಗಿ ಇಬ್ಬರೂ ಪರಸ್ಪರ ಹೊಂದಾಣಿಕೆಯಿಂದ ಹೋಗುವುದು ಒಳ್ಳೆಯದು. ಹಾಗಾಗಿ, ವಿವಿಧ ಇಲಾಖೆಗಳಲ್ಲಿ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರು ಎದುರಿಸುತ್ತಿರುವ ಇನ್ನೂ ಹಲವು ಸಮಸ್ಯೆಗಳ ಬಗೆಹರಿಸಲು ಸಭೆ ನಡೆಸಬೇಕು. ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಪತ್ರದಲ್ಲಿ ಆರ್​. ಮಂಜುನಾಥ್​ ಉಲ್ಲೇಖಿಸಿದ್ದಾರೆ.

ಸಂಘದ ಉಪಾಧ್ಯಕ್ಷರಾದ ದಿನೇಶ್​, ಕೃಷ್ಣೇಗೌಡ, ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್​ ಮತ್ತಿತರರಿದ್ದರು.

ಗುತ್ತಿಗೆದಾರರಿಗೆ ಭರವಸೆ: ವಸತಿ ಇಲಾಖೆಯ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಅಂದಾಜು 3 ಸಾವಿರ ಕೋಟಿ ರೂ.ಬಿಲ್​ಗಳಿಗೆ ಶ್ರೀದಲ್ಲೇ ಹಣ ಬಿಡುಗಡೆ ಮಾಡುವುದಾಗಿ ಸಚಿವ ಜಮೀರ್​ ಅಹ್ಮದ್​ ಗುತ್ತಿಗೆದಾರರಿಗೆ ಭರವಸೆ ಕೊಟ್ಟಿದ್ದಾರೆ ಎಂದು ಸಂಘದ ಅಧ್ಯಕ್ಷ ಆರ್​.ಮಂಜುನಾಥ್​ ಹೇಳಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಗುರುವಾರ ನಮ್ಮ ಜೊತೆ ನಡೆಸಿದ್ದ ಸಭೆಯಲ್ಲಿ ಜೇಷ್ಠತೆ ಆಧಾರದಲ್ಲಿ ಬಾಕಿ ಉಳಿದಿರುವ ಬಿಲ್​ಗಳಿಗೆ ಹಣ ಬಿಡುಗಡೆ ಮಾಡುವುದು,ಟೆಂಡರ್​ನಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆ ಪಾಲನೆ ಆಗದಿರುವುದು ಹಾಗೂ ಅಧಿಕಾರಿಗಳು ಸ್ಪಂದಿಸದಿರುವುದೂ ಸೇರಿ ಗುತ್ತಿಗೆದಾರರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು ಎಂದರು.ಅಧಿಕಾರಿಗಳು ಅವರವರ ಅನುಕೂಲಕ್ಕೆ ತಕ್ಕಂತೆ ಹಣ ಬಿಡುಗಡೆ ಮಾಡುತ್ತಿರುವುದು, ಅವರದ್ದೇ ಫಾಮುರ್ಲಾ ಉಪಯೋಗಿಸಿ “ಸ್ಪೆಷಲ್​ ಎಲ್​ಒಸಿ'( ಹಣ ಬಿಡುಗಡೆ ಪತ್ರ) ರೂಪದಲ್ಲಿ ಹಣ ದುರುಪಯೋಗ ಮಾಡುತ್ತಿರುವ ಬಗ್ಗೆಯೂ ಸಚಿವರ ಗಮನಕ್ಕೆ ತಂದೆವು. ಸಭೆಯಲ್ಲಿ ವ್ಯಕ್ತವಾದ ಎಲ್ಲ ಸಮಸ್ಯೆಗಳನ್ನು ಸಾಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಸಚಿವರ ನಮಗೆ ಭರವಸೆ ಕೊಟ್ಟಿದ್ದಾರೆ. ಹಾಗಾಗಿ, ಅದಷ್ಟೂ ಬೇಗ ಬಾಕಿ ಬಿಲ್​ಗಳಿಗೆ ಹಣ ಬಿಡುಗಡೆ ಆಗುವ ನಂಬಿಕೆ ಇದೆ ಎಂದು ಮಂಜುನಾಥ್​ ವಿಶ್ವಾಸ ವ್ಯಕ್ತಪಡಿಸಿದರು.

ಕೋಟ್​:
ನಾಲ್ಕು ನೀರಾವರಿ ನಿಗಮಗಳಲ್ಲಿ ಹಣ ಬಿಡುಗಡೆ ಮತ್ತು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಸಂಬಂಧಪಟ್ಟಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ.
| ಆರ್​. ಮಂಜುನಾಥ್​. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ.

 

ಭಾರತೀಯ ಸೇನೆಗೆ ಭಗವಂತ ಶಕ್ತಿ ತುಂಬಲಿ; ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ; ರಾಮಲಿಂಗಾ ರೆಡ್ಡಿ ಆದೇಶ| Temple

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…