ಮೋರಟಗಿ: ರಾಜ್ಯ ಸರ್ಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಜಯಪುರ ಮೀಸಲು ಕ್ಷೇತ್ರದ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಪ್ರಚಾರಾರ್ಥವಾಗಿ ಏ.21 ರಂದು ಬೆಳಗ್ಗೆ 10 ಗಂಟೆಗೆ ಸಿಂದಗಿ ವಿಧಾನಸಭಾ ಕ್ಷೇತ್ರದ ಮೋರಟಗಿ ಗ್ರಾಮಕ್ಕೆ ಆಗಮಿಸಲಿದ್ದಾರೆ.
ಮೋರಟಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಬೂತ್ ಮಟ್ಟದ ಅಧ್ಯರು, ಸದಸ್ಯರು ಹಾಗೂ ಪದ ಅಭಿಮಾನಿಗಳು ಪ್ರಚಾರ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೂರಂದೇಶ್ವರ ಕಲ್ಯಾಣ ಮಂಟಪದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯ ಸುರೇಶ ಪೂಜಾರಿ ಹಾಗೂ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯ ಸಲೀಮ್ ಕಣ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.