ದೇಸಿ ತಳಿ ಗೋವುಗಳ ಸಂತತಿ ರಕ್ಷಿಸಿ

ಕಂಪ್ಲಿಯಲ್ಲಿ ನಂದಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಕಲ್ಯಾಣಿಚೌಕಿಮಠದ ಬಸವರಾಜಶಾಸ್ತ್ರಿ, ಪ್ರಮುಖರಾದ ಧನುಷ್, ನವೀನ್, ಪ್ರಭು ಇತರರಿದ್ದರು.

ಕಂಪ್ಲಿ: ವಿಷಮುಕ್ತ ಆಹಾರ ಸೇವನೆಯಿಂದ ವಿಮುಕ್ತರಾಗಲು ಮನೆಗೊಂದು ಗೋವು ಸಾಕಬೇಕು ಎಂದು ಕಲ್ಯಾಣಿ ಚೌಕಿಮಠದ ಬಸವರಾಜಶಾಸ್ತ್ರಿಗಳು ಹೇಳಿದರು.

ಇದನ್ನೂ ಓದಿ:ಆಹಾರ, ಮಾನಸಿಕ ಒತ್ತಡ ಸಮತೋಲನ ಕಾಪಾಡಿಕೊಳ್ಳಿ

ಬಂಟ್ವಾಳ ತಾಲೂಕಿನ ಪುದು ಗ್ರಾಮದ ರಾಧಾ ಸುರಭಿ ಗೋಮಂದಿರ ಹಾಗೂ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ನಂದಿ ರಥಯಾತ್ರೆಯನ್ನು ಉದ್ಭವ ಮಹಾಗಣಪತಿ ದೇವಸ್ಥಾನದ ಬಳಿ ಗುರುವಾರ ಸ್ವಾಗತಿಸಿ ಮಾತನಾಡಿದರು.
ಗೋವುಗಳ ಸಂರಕ್ಷಣೆ ಇಲ್ಲದೆ ವಿಷವರ್ತುಲದಲ್ಲಿ ಜೀವಿಸುವಂತಾಗಿದೆ. ಗೋವುಗಳ ರಕ್ಷಣೆ, ಸಾಕಣೆಯಿಂದ ಮಾತ್ರ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯ. ಈ ದಿಸೆಯಲ್ಲಿ ಪ್ರತಿಯೊಬ್ಬರು ದೇಶಿ ಗೋವು ಸಂತತಿ ರಕ್ಷಣೆಗೆ ಮುಂದಾಗಬೇಕು ಎಂದರು. ನಂದಿ ರಥಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು.
ರಥಯಾತ್ರೆಯ ಸಂಚಾಲಕ ಧನುಷ್, ಪ್ರಮುಖರಾದ ನವೀನ್, ಪ್ರಭು, ಡಿ.ಮಂಜೇಶ್, ಹರಿಶಂಕರ್, ವಿಷ್ಣು, ಎಚ್.ನಾಗರಾಜ, ಎಸ್.ಡಿ.ಬಸವರಾಜ, ಎಲಿಗಾರ ವೆಂಕಟರೆಡ್ಡಿ, ಯು.ಎಂ.ವಿದ್ಯಾಶಂಕರ, ಅರವಿ ಅಮರೇಶ ಇತರರಿದ್ದರು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…