ಸಮುದಾಯಕ್ಕೆ ನ್ಯಾಯ ಆಗ್ರಹಿಸಿ ಪ್ರತಿಭಟನೆ : ತಾಲೂಕು ಮುಸ್ಲಿಂ ಸಮಾಜ ಅಧ್ಯಕ್ಷ ಕೆ.ಎಚ್.ಅಬೂಬಕ್ಕರ್ ಮಾಹಿತಿ

blank

ಬಂಟ್ವಾಳ: ನಾವು ಯಾವ ಧರ್ಮದ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ, ನಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ. ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಎಂದು ಬಂಟ್ವಾಳ ತಾಲೂಕು ಮುಸ್ಲಿಂ ಸಮಾಜ ಅಧ್ಯಕ್ಷ ಕೆ.ಎಚ್.ಅಬೂಬಕ್ಕರ್ ಹೇಳಿದರು.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮಾಜ ಬಂಟ್ವಾಳ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧ ಮುಂಭಾಗ ಬುಧವಾರ ನಡೆಸಿದ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ಸಚಿವ ಬಿ.ರವಾನಾಥ ರೈ ಮಾತನಾಡಿ, ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಮಾಜ ಕೈಗೊಂಡಿರುವ ಪ್ರತಿಭಟನೆಗೆ ಕಾಂಗ್ರೆಸ್ ಪರವಾಗಿ ಬಂದಿದ್ದೇನೆ. ಮುಸ್ಲಿಂ ಸಮಾಜಕ್ಕೆ ಅನ್ಯಾಯವಾದಾಗ ಸಮಾಜದ ಪರ ನಿಲ್ಲುವುದು ತುಷ್ಟೀಕರಣವಲ್ಲ. ಕಾಂಗ್ರೆಸ್ ಸರ್ಕಾರವಿದ್ದಾಗ ಎಲ್ಲರನ್ನೂ ಸಮಾನರನ್ನಾಗಿ ಕಂಡಿದ್ದೇವೆ ಎಂದರು.

ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡವನ್ನು ವಿರೋಧಿಸಲಾಯಿತು. ಬಳಿಕ ಮೃತರ ಆತ್ಮಕ್ಕೆ ಶಾಂತಿಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಮುಖಂಡ ರಫೀಯುದ್ದೀನ್ ಕುದ್ರೋಳಿ, ಅಮಾನುಲ್ಲಾ ವಾಸ್ಟರ್, ಮಂಗಳೂರು ಮಾಜಿ ಮೇಯರ್ ಅಶ್ರಫ್, ಅಶ್ರಫ್ ಬದ್ರಿಯಾ, ಮುಸ್ಲಿಂ ಸಮಾಜ ಗೌರವಾಧ್ಯಕ್ಷ ಬಿ.ಎಚ್.ಅಬ್ದುಲ್ ಖಾದರ್, ಸಿರಾಜ್, ಅಬ್ಬಾಸ್ ಆಲಿ ಬೋಳಂತೂರು, ಎಂ.ಎಸ್.ಮಹಮ್ಮದ್, ಜಾಫರ್ ಫೈಜಿ, ಪಿ..ರಹೀಂ, ಇಬ್ರಾಹಿಂ ಕೈಲಾರ್, ಶಾಹುಲ್ ಎಚ್.ಎಸ್., ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬೇಬಿ ಕುಂದರ್, ಪಿಯೂಸ್ ಎಲ್.ರೋಡ್ರಿಗಸ್ ಮೊದಲಾದವರು ಪಾಲ್ಗೊಂಡಿದ್ದರು. ಐಎಂಆರ್ ಇಕ್ಬಾಲ್ ಸ್ವಾಗತಿಸಿದರು.

ಮಂಗಳೂರು ಗಾಂಜಾ ಸೇವನೆ ನಾಲ್ವರ ಬಂಧನ

ಸಾಹಿತ್ಯದಲ್ಲಿ ಸಂದೇಶ ಸಾರುವುದು ಅವಶ್ಯ ‘ಕಾಲು ಸಾವಿರ’ ಚುಟುಕುಗಳ ಕೃತಿ ಬಿಡುಗಡೆಗೊಳಿಸಿ ಸಾಹಿತಿ ಶಾಂತಾರಾಮ ಶೆಟ್ಟಿ ಹೇಳಿಕೆ

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…