ತಾಲೂಕು ಕಚೇರಿಗೆ ಮುತ್ತಿಗೆ

blank

ಮದ್ದೂರು : ಬೆಂಗಳೂರು ದಕ್ಷಿಣ ವಿಭಾಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೆ.ಎಸ್.ಪ್ರತಿಮಾ ಹತ್ಯೆ ಅಮಾನವೀಯವಾಗಿದೆ. ತಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ವೇದಿಕೆಯ ಜಿಲ್ಲಾಧ್ಯಕ್ಷ ವಳಗೆರಹಳ್ಳಿ ವಿ.ಸಿ.ಉಮಾಶಂಕರ್ ಮಾತನಾಡಿ, ಕೆ.ಎಸ್. ಪ್ರತಿಮಾ ಅವರನ್ನು ಅವರ ನಿವಾಸದಲ್ಲಿ ಕಿಡಿಗೆಡಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಪ್ರಜಾತಂತ್ರ ವ್ಯವಸ್ಥೆಯನ್ನು ತಲೆತಗ್ಗಿಸುವಂತೆ. ಈ ಹತ್ಯೆ ಹಿಂದೆ ಗಣಿಗಾರಿಕೆ ಮಾಫಿಯಾದ ಕೈವಾಡವಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.
ವೇದಿಕೆಯ ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಕಾರ್ಯಾಧ್ಯಕ್ಷ ಸಾಗರ್, ಗೌರಾವಧ್ಯಕ್ಷ ವಿ.ಎಚ್. ಶಿವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ರೈತ ಮುಖಂಡರಾದ ಹುರುಗಲವಾಡಿ ಉಮೇಶ್, ವಿ.ಎಂ.ರಮೇಶ್, ಮುಖಂಡರಾದ ಗೊರವನಹಳ್ಳಿ ಕೃಷ್ಣೇಗೌಡ, ಸಕ್ಕರೆ ನಾಗರಾಜು, ಎಸ್.ಕೆ.ಗಿರೀಶ್, ಕೋಣಸಾಲೆ ಕೃಷ್ಣ, ಶಶಿಕುಮಾರ್, ದೇವರಾಜ್, ವಿ.ಸಿ. ಹರಿಣಿ, ಕೆ. ಪಲ್ಲವಿ, ದಿವ್ಯಾ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…