More

    ರಾಮ ಭಕ್ತರ ಬಂಧನ ಖಂಡಿಸಿ ಪ್ರತಿಭಟನೆ

    ಶಿರಸಿ: ಹುಬ್ಬಳ್ಳಿಯಲ್ಲಿ ರಾಮ ಭಕ್ತರ ಬಂಧನ ಖಂಡಿಸಿ ನಗರದ ಡಿವೈಎಸ್ಪಿ ಕಚೇರಿಯ ಆವರಣದಲ್ಲಿ ಬಿಜೆಪಿ, ಹಿಂದು ಜಾಗರಣಾ ವೇದಿಕೆ ಹಾಗೂ ವಿಚಾರ ಪರಿವಾರ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ ಮಾತನಾಡಿ, ರಾಮ ಭಕ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ತನ್ನ ಧೋರಣೆ ಹೀಗೆ ಮುಂದುವರೆಸಿದರೆ ಹಿಂದು ಸಮಾಜ ತಕ್ಕ ಪಾಠ ಕಲಿಸುತ್ತದೆ. ಸುಳ್ಳು ಪ್ರಕರಣ ದಾಖಲಿಸಿ, ಬಂಧನದ ಮೂಲಕ ಹಿಂದು ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಯಶಸ್ವಿ ಆಗಲಾರದು ಎಂದರು.

    ಹಿಂದು ಜಾಗರಣಾ ವೇದಿಕೆಯ ಶಿರಸಿ ಜಿಲ್ಲಾ ಸಂಚಾಲಕ ಹರೀಶ ಕರ್ಕಿ ಮಾತನಾಡಿ, ಇಡೀ ರಾಷ್ಟ್ರ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಎದುರು ನೋಡುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರ ಅವರ ಬಂಧನ ದುರದೃಷ್ಟಕರ. ಕಾಂಗ್ರೆಸ್ ಸರ್ಕಾರ ರಾಮ ಭಕ್ತರ ಬಂಧನವನ್ನು ಕೂಡಲೇ ಕೈಬಿಡಲಿ, ಇಲ್ಲವೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಉಷಾ ಹೆಗಡೆ, ಬಜರಂಗದಳ ಸಂಚಾಲಕ ಅಮಿತ್ ಶೇಟ್, ಮಧುಸೂದನ ಕಿರುಗಾರ, ಶ್ರೀಧರ ಹಿರೇಹದ್ದ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ವೀಣಾ ಶೆಟ್ಟಿ, ನಂದನ ಸಾಗರ, ವಿಚಾರ ಪರಿವಾರ ಸಂಘಟನೆಗಳ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts