More

    ಸಿಎಎ ವಿರೋಧಿಸಿ ಪ್ರತಿಭಟನೆ

    ಚಾಮರಾಜನಗರ: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ತಾಲೂಕು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪದಾಧಿಕಾರಿಗಳು ಕೊಳ್ಳೇಗಾಲ ಪಟ್ಟಣದ ಡಾ. ಅಂಬೇಡ್ಕರ್ ಪ್ರತಿಮೆ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.


    ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಖಲೀಲ್, ಕೇಂದ್ರ ಸರ್ಕಾರ ಜಾರಿ ಮಾಡಲು ಹೊಟಿರುವ ಸಿಎಎ ಕಾಯ್ದೆ ಸಂವಿಧಾನ ಆಶಯಕ್ಕೆ ವಿರುದ್ಧವಾಗಿದೆ. ಈ ಕಾಯ್ದೆ ದೇಶದ ಐಕ್ಯತೆ ಹಾಗೂ ಸಮಗ್ರತೆಗೆ ದಕ್ಕೆ ತರುವಂತಿದೆ. ಕೇಂದ್ರ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಕೋಮು ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದೆ. ಆದ್ದರಿಂದ ಸಿಎಎ ಕಾಯ್ದೆ ಅನುಷ್ಠಾನ ಆಗಬಾರದು ಎಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಟೌನ್ ಅಧ್ಯಕ್ಷ ಜಾಕೀರ್ ಪಾಷ, ಕಾರ್ಯದರ್ಶಿ ಇಮ್ರಾನ್, ಉಪಾಧ್ಯಕ್ಷ ಮುಜೇಮಿಲ್, ಧರ್ಮ ಗುರುಗಳಾದ ಉಜೇರ್, ಲುಕ್ಮಾನ್, ಶೋಹೆಬ್, ಮುಖಂಡರಾದ ಫಾಯಿಕ್, ಆರೀಫ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts