More

    ಆಂಬುಲೆನ್ಸ್‌ಗೆ ಹಣ ವಸೂಲಿ ಖಂಡಿಸಿ ಪ್ರತಿಭಟನೆ

    ಕುಶಾಲನಗರ: ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಸಮಯದಲ್ಲಿ ಆಂಬುಲೆನ್ಸ್‌ಗೆ ಹಣ ವಸೂಲಿ ಮಾಡುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಸವನಹಳ್ಳಿ ಹಾಡಿ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.


    ಕೆಲವು ದಿನಗಳ ಹಿಂದೆ ಬೈಲುಕುಪ್ಪೆ ಬಳಿ ನಡೆದ ಅಪಘಾತವೊಂದರಲ್ಲಿ ಫಾರೆಸ್ಟ್ ಗಾರ್ಡ್ ಪ್ರಾಣ ಕಳೆದುಕೊಂಡಿದ್ದರು. ಆ ವಾಹನದಲ್ಲಿದ್ದವರಿಗೆ ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.

    8 ನೇ ತರಗತಿಯ ದೀಪಾ ಎಂಬ ಬಾಲಕಿಗೆ ತಲೆಗೆ ಪೆಟ್ಟಾದ ಕಾರಣ ಮೈಸೂರಿಗೆ ಕರೆದುಕೊಂಡು ಹೋಗಬೇಕಾಯಿತು. ಆ ಸಮಯದಲ್ಲಿ ಅವರಿಂದ 3 ಸಾವಿರ ರೂ.ಗಳನ್ನು ಪಡೆದು ಮೈಸೂರಿಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ಉಚಿತ ಸೇವೆ ಅಂತ ಹೇಳುತ್ತೆ, ಆದರೆ ತುರ್ತು ಸಮಯದಲ್ಲಿ ಆಂಬುಲೆನ್ಸ್ ಗೆ ಹಣ ಕಟ್ಟಿದರೆ ಮಾತ್ರ ಸೇವೆ ಎನ್ನುತ್ತಾರೆ.

    ಹಾಡಿ ನಿವಾಸಿಗಳು ಕೆಲಸ ಕಾರ್ಯವಿಲ್ಲದೇ ಊಟಕ್ಕೂ ಪರದಾಡುವಂತಹ ಸಮಯದಲ್ಲಿ ಈ ರೀತಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರ ಬಗ್ಗೆ ಕೂಡಲೇ ಸಂಬಂಧಪಟ್ಟ ಜಿಲ್ಲಾಡಳಿತ, ಐಟಿಡಿಪಿ ಇಲಾಖೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇದು ಪುನರಾವರ್ತನೆಯಾದರೆ ಜಿಲ್ಲಾಡಳಿತ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ನಿವಾಸಿಗಳು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts