ಬೆಂಗ​ಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ; ಸಮಸ್ಯೆ ಬಗೆಹರಿಸುವಂತ ಸೂಚನೆ ನೀಡಿದ್ದೇನೆ ಎಂದ ಸಿಎಂ

ಕೊಪ್ಪಳ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದ್ದು, ಇದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಟೋಲ್ ಸಂಗ್ರಹಣೆಗೆ ಸ್ಥಳೀಯರು ಹಾಗೂ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ವಿರೋಧದ ನಡುವೆಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶುಲ್ಕ ಸಂಗ್ರಹಣೆಗೆ ಮುಂದಾಗಿದೆ. ಇದೀಗ ಬೆಂಗಳೂರು-ಮೈಸೂರು ಏಕ್ಸ್​ಪ್ರೆಸ್ ಹೈವೆಯಲ್ಲಿ ಪ್ರತಿಭಟನೆ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ನಾನು ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಟೋಲ್​ನವರಿಗೆ ಸೂಚನೆ ನೀಡಿದ್ದೇನೆ. ಪ್ರತಿ ಬಾರಿ ಟೋಲ್ ಪ್ರಾರಂಭವಾದಾಗ ಈ ಸಮಸ್ಯೆ … Continue reading ಬೆಂಗ​ಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ; ಸಮಸ್ಯೆ ಬಗೆಹರಿಸುವಂತ ಸೂಚನೆ ನೀಡಿದ್ದೇನೆ ಎಂದ ಸಿಎಂ