ವಕ್ಫ್ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

Protest against Wakf amendment

ಬಾದಾಮಿ: ಕೇಂದ್ರ ಸರ್ಕಾರ ವಕ್ಛ್ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ನಗರದಲ್ಲಿ ಏ.22 ರಂದು ಬೆಳಗ್ಗೆ 10.30ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಮಿಟಿ ಅಧ್ಯಕ್ಷ ಮಹಮ್ಮದ ಯೂಸ್ು ಪೀರ್ಜಾದೆ ತಿಳಿಸಿದರು.

blank

ನಗರದ ಕಾನಿಪ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ್ಯಾಸಿಸ್ಟ್ ಕೇಂದ್ರ ಸರ್ಕಾರವು ವಕ್ಛ್ ಕಾಯ್ದೆಯನ್ನು ತಿದ್ದುಪಡಿ ಮಾಡಿ ಜಾರಿಗೊಳಿಸುತ್ತಿದೆ. ಈ ಅನೀತಿ, ದಯನೀಯ ವೈಲ್ಯ, ದ್ವೇಷ ರಾಜಕೀಯ, ತಾರತಮ್ಯ ಆಡಳಿತ, ಬಂಡಶಾಹಿಗಳ ಕೋಟ್ಯಂತರ ರೂ.ಸಾಲ ಮನ್ನಾ ಮುಂತಾದವುಗಳ ವಿರುದ್ಧ ದೇಶದ ಜನರು ಹೋರಾಟ ಮಾಡುತ್ತಿದ್ದಾರೆ. ಕರಾಳ ತಿದ್ದುಪಡಿ ವಕ್ಛ್ ಕಾಯ್ದೆ ಜಾರಿ ಮಾಡಿರುವುದನ್ನು ವಿರೋಧಿಸಿ ನಗರದಲ್ಲಿ ರ‌್ಯಾಲಿ ಮೂಲಕ ಶಾಂತಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ರ‌್ಯಾಲಿಯು ಅಂಜುಮನ್ ಶಾಲಾವರಣದಿಂದ ಆರಂಭವಾಗಿ ಮುಖ್ಯ ರಸ್ತೆಯ ಮೂಲಕ ಬಸವೇಶ್ವರ ಸರ್ಕಲ್ ಸುತ್ತುವರೆದು ಪುನಃ ರಾಮದುರ್ಗ ವೃತ್ತದವರೆಗೆ ಬಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು. ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ರಾಜಮಹ್ಮದ ಬಾಗವಾನ, ಅಂಜುಮನ್ ಕಮಿಟಿ ಉಪಾಧ್ಯಕ್ಷ ಇಸ್ಮಾಯಿಲ್ ಬಾಗವಾನ, ಸದಸ್ಯರಾದ ತಯ್ಯಬಲಿ ಅಲಿ ಖಲೀ, ಬಾಬಜಾನ ಗೋಲಂದಾಜ, ಅಬ್ದುಲಖಾದರ ಜಮಾದಾರ, ಬಸೀರಅಹ್ಮದ ಅತ್ತಾರ, ದಾದಾಪೀರ ಇಟಗಿ, ಮಹಮ್ಮದ್‌ಅಲಿ ಖಲೀ, ಅಮೀನ ನಾಯಕ ಮತ್ತಿತರರಿದ್ದರು.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…