ಹುಬ್ಬಳ್ಳಿ: ಪೌರಕಾರ್ಮಿಕರ ನೇರ ನೇಮಕಾತಿ, ನೇರ ವೇತನ ಪಾವತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿಯ ಮಹಾನಗರ ಪಾಲಿಕೆ ಕಚೇರಿ ಮುಂದೆ ಧಾರವಾಡ ಜಿಲ್ಲಾ ಪೌರ ಕಾರ್ಮಿಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು.
ಕೈಯಲ್ಲಿ ಪೊರಕೆ ಹಿಡಿದ ಪೌರ ಕಾರ್ಮಿಕರು, ರಾಜ್ಯ ಸರ್ಕಾರ ಹಾಗೂ ಪಾಲಿಕೆ ಆಯುಕ್ತರ ವಿರುದ್ಧ ಧಿಕ್ಕಾರ ಕೂಗಿದರು.
ಸರ್ಕಾರ ಈವರೆಗೂ 4 ನೇಮಕಾತಿ ಅದಿಸೂಚನೆ ಹೊರಡಿಸಿದೆ. ಆದರೆ, 8 ವರ್ಷದಲ್ಲಿ ಮೊದಲನೇ 134 ನೇರ ನೇಮಕಾತಿ ಇದುವರೆಗೂ ಮಾಡಿಕೊಂಡಿಲ್ಲ. ಇನ್ನುಳಿದ 870 ಹುದ್ದೆಗಳನ್ನು ಯಾವಾಗ ನೇಮಿಸಿಕೊಳ್ಳುತ್ತಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
799 ನೇರ ವೇತನ ಪಾವತಿಗೆ ಅನುಮೋದನೆ ಪಡೆಯುತೇವೆ ಎಂದು ಆಯುಕ್ತರು ಭರವಸೆ ನೀಡಿದ್ದರು. 6 ತಿಂಗಳು ಗತಿಸಿದರೂ ನೀಡಿದ ಭರವಸೆ ಹುಸಿಯಾಗಿದೆ. ಇನ್ನು ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸದೇ ಪೌರಕಾರ್ಮಿಕರನ್ನು ಶೋಷಣೆ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಆರೋಪಿಸಿದರು.
ಸಂಘದ ಧಾರವಾಡ ಜಿಲ್ಲಾಧ್ಯಕ್ಷ ವಿಜಯ ಗುಂಟ್ರಾಳ, ಗಾಳೆಪ್ಪ ದ್ವಾಸಲಕೇರಿ, ಗಂಗಮ್ಮ ಸಿದ್ರಾಮಪುರ, ಕನಕಪ್ಪ ಕೊಟಬಾಗಿ, ದತ್ತಪ್ಪ ಆಪುಸಪೇಟ್, ಯಲಪ್ಪ ಪಾಳೇದ, ಲಕ್ಷ್ಮೀ ಬೇತಾಪಲ್ಲಿ, ಯಮನವ್ವ ಬೆನಸಮಟ್ಟಿ, ವೆಂಕಟೇಶ ಪಾಲವಾಯಿ, ಭಾಗ್ಯಲಕ್ಷ್ಮೀ ಮಾದರ, ಹೊಳಲಮ್ಮ ಕಡಕೋಳ, ಹುಲಿಗೆಮ್ಮ ಚಿಕಟುಂಬಳ, ಕಸ್ತೂರಿ ತಮದಡ್ಡಿ, ಲಕ್ಷ್ಮೀ ತುರಿಹಾಳ, ನಾಗರಾಜ ದೊಡ್ಡಮನಿ ಇತರರು
ಪೊರಕೆ ಹಿಡಿದು ಪೌರ ಕಾರ್ಮಿಕರ ಪ್ರತಿಭಟನೆ
You Might Also Like
ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..! sweet
sweet: ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…
astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ
astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …
27 ವರ್ಷದ ನಂತ್ರ ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…