More

    ದಲಿತ ಸಂಘಟನೆಯಿಂದ ಪ್ರತಿಭಟನೆ

    ಹುಬ್ಬಳ್ಳಿ : ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬೀದರನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರನ್ನು ಹಾಗೂ ಅವರ ಕುಟುಂಬವನ್ನು ನಿಂದಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ವಿರುಪಾಕ್ಷ ಗಾಡಗೆ ಎಂಬ ವ್ಯಕ್ತಿ ಗೃಹ ಸಚಿವ ಡಾ. ಜಿ. ಪರಮೇಶ್ವರ, ಅವರ ಪತ್ನಿ ಹಾಗೂ ಪುತ್ರನನ್ನು ಭಾಷಣದ ಸಂದರ್ಭದಲ್ಲಿ ನಿಂದಿಸಿದ್ದಾನೆ. ಆ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದವರು ಸಹ ಆತನ ಭಾಷಣಕ್ಕೆ ಚಪ್ಪಾಳೆ ತಟ್ಟಿದ್ದಾರೆ. ಗಾಡಗೆ ಹಾಗೂ ಅಲ್ಲಿ ನೆರೆದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

    ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಉಪ ನಗರ ಪೊಲೀಸ್ ಠಾಣೆ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

    ಶಾಸಕ ಪ್ರಸಾದ ಅಬ್ಬಯ್ಯ, ಗುರುನಾಥ ಉಳ್ಳಿಕಾಶಿ, ಗಣೇಶ ಟಗರಗುಂಟಿ, ದೊರಾಜ ಮಣಿಕುಂಟಲ, ಸುಧಾ ಮಣಿಕುಂಟಲ, ರಜನಿ ಬಿಜವಾಡ, ಸಂತೋಷ ಚಲವಾದಿ, ಮಹೇಶ ದಾಬಡೆ, ಶ್ಯಾಮ ಜಾಧವ, ಶ್ರೀನಿವಾಸ ಬೆಳದಡಿ, ದೇವಣ್ಣ ಇಟಗಿ ಹಾಗೂ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts