ದಶಪಥ ಹೆದ್ದಾರಿ ಉದ್ಘಾಟನೆಗೆ ವಿರೋಧ; ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ

ರಾಮನಗರ: ಮೈಸೂರು-ಬೆಂಗಳೂರು ಹೆದ್ದಾರಿ ಉದ್ಘಾಟನೆಗೆಂದು ಸಕ್ಕರೆ ನಾಡು ಮಂಡ್ಯಕ್ಕೆ ಪ್ರಧಾನಿ ಮೋದಿ ಅವರಿಂದು (ಮಾ.12) ಭೇಟಿ ನೀಡಿದ್ದಾರೆ. ಇದೀಗ ಪ್ರಧಾನಿ ಮೋದಿ ದಶಪಥ ಹೆದ್ದಾರಿಯನ್ನು ಲೋಕಾಪರ್ಣೆಗೊಳಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಪ್ರತಿಭಟನೆ ನಡೆಸಿ, ಪ್ರಧಾನಿ ಮೋದಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಕಾಮಗಾರಿ ‌ಪೂರ್ಣಗೊಳಿಸದೆ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದಕ್ಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನ … Continue reading ದಶಪಥ ಹೆದ್ದಾರಿ ಉದ್ಘಾಟನೆಗೆ ವಿರೋಧ; ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ