ಜೀವವಿಮಾ ಪ್ರತಿನಿಧಿಗಳ ಪ್ರತಿಭಟನೆ

blank

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ ತಾಲೂಕು ಘಟಕದ ವತಿಯಿಂದ ಪಟ್ಟಣದ ಜೀವ ವಿಮಾ ಕಚೇರಿ ಎದುರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.


ಜೀವವಿಮಾ ಪ್ರತಿನಿಧಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಕೃಷ್ಣೆಗೌಡ ಮಾತನಾಡಿ, ಜೀವವಿಮಾ ಪ್ರತಿನಿಧಿಗಳಿಗೆ ನೀಡಲಾಗುತ್ತಿದ್ದ ಕಮಿಷನ್ ಕಡಿತಗೊಳಿಸಲಾಗಿದ್ದು ಅದನ್ನು ಹೆಚ್ಚಿಸಬೇಕು, ಈ ಹಿಂದಿನ ಆಯೋಗದ ದರಗಳನ್ನು ಮರುಸ್ಥಾಪಿಸಬೇಕು. ಪಾಲಿಸಿದಾರರ ಬೋನಸ್ ದರವನ್ನು ಏರಿಸಬೇಕು, 1 ಲಕ್ಷ ರೂ. ಮುಖಬೆಲೆಯ ಕನಿಷ್ಠ ವಿಮೆಯನ್ನು 2 ಲಕ್ಷಕ್ಕೆ ಏರಿಕೆ ಮಾಡಿರುವುದನ್ನು ಮೊದಲಿನಂತೆ ಮರುಸ್ಥಾಪಿಸಬೇಕು, ಪ್ರೀಮಿಯಂ ದರವನ್ನು ಕಡಿಮೆ ಮಾಡುವುದರ ಜತೆಗೆ ಜಿಎಸ್‌ಟಿಯನ್ನು ತೆಗೆದುಹಾಕಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.


ತಾಲೂಕು ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಗೊರವನಹಳ್ಳಿ ಕೃಷ್ಣೆಗೌಡ, ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಶಿವಲಿಂಗೆಗೌಡ, ಪದಾಧಿಕಾರಿಗಳಾದ ಧ್ರುವಕುಮಾರ್, ಬಸವರಾಜು, ಪುಟ್ಟಸ್ವಾಮಿಗೌಡ, ಪುಟ್ಟರಾಜು, ಚಿಕ್ಕತಮ್ಮಯ್ಯ, ನಾಗಪ್ಪ, ಕುಮಾರ್, ಸಿದ್ದೇಗೌಡ ಇತರರು ಇದ್ದರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…