More

    ತಡವಾಗಿ ಬಂದ ಬಸ್ ತಡೆದು ಪ್ರತಿಭಟನೆ

    ಬೇಲೂರು: ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಾಲೂಕಿನ ಗಂಗಾವರ ಗ್ರಾಮದಲ್ಲಿ ಬಸ್ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು.

    ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ವಾದ) ತಾಲೂಕು ಸಂಘಟನಾ ಸಂಚಾಲಕ ವಸಂತಕುಮಾರ್ ಮಾತನಾಡಿ, ಬೇಲೂರು ತಾಲೂಕಿನ ಗಂಗಾವರ ಗ್ರಾಮಕ್ಕೆ ಬೆಳಗ್ಗೆ 8 ಗಂಟೆಗೆ ಬರುತ್ತಿದ್ದ ಬಸ್ ಇತ್ತೀಚಿನ ದಿನಗಳಲ್ಲಿ 1 ಗಂಟೆಗೂ ಹೆಚ್ಚು ಸಮಯ ತಡವಾಗಿ ಬರುತ್ತಿದೆ. ಇದರಿಂದ ಶಾಲಾ-ಕಾಲೇಜು ಹಾಗೂ ವಿವಿಧ ಕೆಲಸಗಳಿಗೆ ತೆರಳುವವರಿಗೆ ಸಮಸ್ಯೆ ಉಂಟಾಗುತ್ತಿದೆ ಎಂದು ದೂರಿದರು.

    ಶುಕ್ರವಾರ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಿರು ಪರೀಕ್ಷೆ ಇತ್ತು. ಬಸ್ ಸರಿಯಾದ ಸಮಯಕ್ಕೆ ಬಾರದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಂತಾಗಿದೆ. ಪ್ರಶ್ನಿಸಿದರೆ ಚಾಲಕರು ಉಡಾಫೆಯ ಉತ್ತರ ನೀಡುವುದಲ್ಲದೆ, ಖಾಸಗಿ ವಾಹನದಲ್ಲಿ ತೆರಳುವಂತೆ ಹೇಳುತ್ತಾರೆ. ಸಂಬಂಧಪಟ್ಟವರು ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ಸಂದರ್ಭ ಗ್ರಾಮದ ನವೀನ್, ಅಣ್ಣಪ್ಪ, ಲೋಕೇಶ್, ವಿದ್ಯಾರ್ಥಿ ಸಿಂಚನಾ, ಪೂಜಾ, ಪ್ರತೀಕ್ಷಾ, ಪುನೀತ್, ಮನು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts