More

    ವಾರ್ಷಿಕ ಪರೀಕ್ಷೆ ನಡೆಸಲು ಆಗ್ರಹಿಸಿ ಪ್ರತಿಭಟನೆ

    ರಾಣೆಬೆನ್ನೂರ: ಪದವಿ ಕಾಲೇಜ್ ವಿದ್ಯಾರ್ಥಿಗಳಿಗೆ ಈ ಬಾರಿ ಸೆಮಿಸ್ಟರ್ ಪರೀಕ್ಷೆ ಬದಲು ವಾರ್ಷಿಕ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್​ಎಫ್​ಐ) ತಾಲೂಕು ಘಟಕದ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ಕರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಈ ಬಾರಿ ಸರಿಯಾಗಿ ತರಗತಿಗಳು ನಡೆದಿಲ್ಲ. ಜತೆಗೆ ಕಾಲೇಜು ವೇಳಾಪಟ್ಟಿಯಲ್ಲಿ ಹಲವು ಬದಲಾವಣೆಗಳಾಗಿವೆ. ಪ್ರಸಕ್ತ ವರ್ಷದ ಮಟ್ಟಿಗೆ ಸೆಮಿಸ್ಟರ್ ಪದ್ಧತಿ ರದ್ದು ಮಾಡಿ ವಾರ್ಷಿಕ ಪರೀಕ್ಷೆ ನಡೆಸಬೇಕು ಎಂದು ಕಾಲೇಜ್ ಪ್ರಾಚಾರ್ಯ ಲಿಂಗರಾಜ ಸಂಗಳದ ಅವರ ಮೂಲಕ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿಗೆ ಮನವಿ ಸಲ್ಲಿಸಿದರು.

    ಜ್ಯೋತಿ ಪೊಲೀಸಗೌಡ್ರ, ಚಂದ್ರು ರ್ಬಾ, ಗುಡ್ಡಪ್ಪ ಮಡಿವಾಳರ, ಗಿರೀಶ ಮುಂಡಾಸದ, ಕಿರಣ ಲಮಾಣಿ, ನಾಗರಾಜ ಅಂತರವಳ್ಳಿ, ಅಣ್ಣಪ್ಪ ಹೊನ್ನಪ್ಪಳವರ, ಪ್ರಿಯಾ ಕೆ.ಎಸ್., ರೇಣುಕಾ ಎಚ್., ಮಮತಾ ಆರ್. ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts