ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Protest demanding fulfillment of various demands

ಬಸವನಬಾಗೇವಾಡಿ: ರಾಜ್ಯದ ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಕಾನೂನು ತಿದ್ದುಪಡಿ ಮಾಡಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಬಸವೇಶ್ವರ ದೇವಸ್ಥಾನದ ಉದ್ಯಾನವನದಲ್ಲಿ ಸಭೆ ನಡೆಸಿದ ಬಳಿಕ ಪಾದಯಾತ್ರೆಯಲ್ಲಿ ತಹಸೀಲ್ದಾರ್ ಕಚೇರಿಗೆ ತೆರಳಿ ಸಿರಸ್ತೇದಾರ ಎ.ಎಚ್. ಬಳೂರಗಿಗೆ ಮನವಿ ಸಲ್ಲಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ತಾಲೂಕು ಅಧ್ಯಕ್ಷ ಉಮೇಶ ವಾಲಿಕಾರ ಮಾತನಾಡಿ, ರಾಜ್ಯದ ರೈತರಿಗೆ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲದೆ ತೊಂದರೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಆಲಮಟ್ಟಿ ಲಾಲಬಹಾದ್ದುರ್ ಶಾಸೀ ಜಲಾಶಯ ಹಾಗೂ ನಾರಾಯಣಪುರ ಬಸವ ಸಾಗರ ಜಲಾಶಯಗಳ ನೀರು ಮರು ಹಂಚಿಕೆ ಮಾಡಿ ವಿಜಯಪುರ ಜಿಲ್ಲೆಯ ರೈತರಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು.

ತಾಲೂಕು ಗೌರವಾಧ್ಯಕ್ಷ ವಿಠ್ಠಲ ಬಿರಾದಾರ, ತಾಳಿಕೋಟೆ ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಕಾರ‌್ಯಾಧ್ಯಕ್ಷ ಸೋಮನಗೌಡ ಪಾಟೀಲ, ಉಪಾಧ್ಯಕ್ಷ ಹೊನಕೇರೆಪ್ಪ ತೆಲಗಿ, ಶಿವಪ್ಪ ಇಂಗಳೆಶ್ವರ, ಈರಣ್ಣ ದೇವರಗುಡಿ, ಚಂದ್ರಾಮ ತೆಗ್ಗಿ ರಾಜೇಸಾಬ ವಾಲಿಕಾರ, ದಾವಲಸಾಬ ನದಾಪ್, ಚನ್ನಬಸಪ್ಪ ಸಿಂದೂರ್, ಚೆನ್ನಪ್ಪ ಗೂಡುರ್, ಪರಸು ಹೊಸೂರ, ಪರಶುರಾಮ ಮುತ್ತಗಿ, ಸೋಮೇಶ ನಾಗರೆಡ್ಡಿ, ಯಮನಪ್ಪಗೌಡ ಹೋಸೂರ, ಸಾಹೇಬಗೌಡ ಹೊಸೂರ ಇತರರಿದ್ದರು.

Share This Article

ನೀವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಒಮ್ಮೆ ಹೀಗೆ ಮಾಡಿ ನೋಡಿ..Gastric Problem

Gastric Problem: ಪ್ರಸ್ತುತ ಯುಗದಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಅನೇಕ ಜನರನ್ನು ಕಾಡುವ ಆರೋಗ್ಯ ಸಮಸ್ಯೆಯಾಗಿದೆ. ಅನಾರೋಗ್ಯಕರ…

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…