ಶ್ರೀಲಂಕಾ ಬಿಕ್ಕಟ್ಟು: ಪ್ರತಿಭಟನಾಕಾರರಿಂದ ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ, ಭೀತಿಯಿಂದ ನಿವಾಸ ತೊರೆದ ರಾಜಪಕ್ಸ!

ಕೊಲಂಬೋ: ಆರ್ಥಿಕ ಸ್ಥಿತಿಯಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಪ್ರತಿಭಟನಾಕಾರರ ಆಕ್ರೋಶದ ಕಟ್ಟೆ ಒಡೆದಿದ್ದು, ರಾಷ್ಟ್ರಪತಿ ನಿವಾಸಕ್ಕೆ ನುಗ್ಗಿ ಹೋರಾಟವನ್ನು ಮುಂದುವರಿಸಿದ್ದಾರೆ.ಶನಿವಾರ ಬೆಳಗ್ಗೆಯಿಂದಲೇ ಸಾವಿರಾರು ಮಂದಿ ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರಯತ್ನಿಸಲು ವಿಫಲರಾದ ಪೊಲೀಸರಿಂದ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಕಳೆದ ಜನವರಿಯಿಂದಲೂ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಅನುಭವಿಸುತ್ತಿರುವ ಶ್ರೀಲಂಕಾ ಈವರೆಗೆ ಸುಧಾರಣೆಯ ಕ್ರಮ ಕೈಗೊಳ್ಳದಿರುವುದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿದ್ದು, ಅಗತ್ಯ ವಸ್ತುಗಳ ಕೊರತೆಯಿಂದಾಗಿ ಅವುಗಳ … Continue reading ಶ್ರೀಲಂಕಾ ಬಿಕ್ಕಟ್ಟು: ಪ್ರತಿಭಟನಾಕಾರರಿಂದ ರಾಷ್ಟ್ರಪತಿ ನಿವಾಸಕ್ಕೆ ಮುತ್ತಿಗೆ, ಭೀತಿಯಿಂದ ನಿವಾಸ ತೊರೆದ ರಾಜಪಕ್ಸ!