Karnataka Bandh: ಇತ್ತೀಚೆಗೆ ಮಹಾರಾಷ್ಟ್ರ ಮರಾಠಿ ಪುಂಡರು ಕನ್ನಡಿಗರ ಮೇಲೆ ನಡೆಸಿದ ಅಟ್ಟಹಾಸ, ದಬ್ಬಾಳಿಕೆಯನ್ನು ತೀವ್ರ ಖಂಡಿಸಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಇಂದು ರಾಜ್ಯಾದ್ಯಂತ ಬಂದ್ಗೆ ಕರೆ ನೀಡಿದ್ದಾರೆ. ಬಂದ್ಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದರೆ, ಇನ್ನೂ ಕೆಲವು ಸಂಘಟನೆಗಳು ನೈತಿಕ, ನೇರ ಬಂಬಲ ಕೊಟ್ಟಿಲ್ಲ. ಸದ್ಯ ಇದೇ ಬಂದ್ ಬಿಸಿಯನ್ನು ಕೊಂಚ ಮಟ್ಟಿಗೆ ಇಳಿಸಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಕಮಾಲ್, ಕಿಯಾರಾ ಮಾಲಾಮಾಲ್ ! : ಪ್ಯಾನ್ ವರ್ಲ್ಡ್ ಚಿತ್ರಕ್ಕೆ 15 ಕೋಟಿ ಸಂಭಾವನೆ ಪಡೆದ ಬಾಲಿವುಡ್ ನಟಿ
ಬಂದ್ ಹಿನ್ನೆಲೆ ಸಾರಿಗೆ ಬಸ್ಗಳ ಸಂಚಾರ, ಆಟೋ, ಟ್ಯಾಕ್ಸಿ ಇರಲಿದೆಯೇ ಎಂಬ ಅನುಮಾನ ಜನರಲ್ಲಿ ಮೂಡಿತ್ತು. ಆದರೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ಸಾರಿಗೆ ಸಂಚಾರ ಆರಂಭಗೊಂಡಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗಿಳಿದಿವೆ. ಒಂದೆಡೆ ಬಸ್ಗಳ ಸಂಚಾರ ಆರಂಭಗೊಂಡಿದ್ದೇ ತಡ ಕೆಲವು ಕನ್ನಡ ಪರ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿವೆ.
ಬಸ್ ನಿಲ್ದಾಣ ಸೇರಿದಂತೆ ರಸ್ತೆಗಳಲ್ಲಿ ಸಾರಿಗೆ ಬಸ್ಗಳನ್ನು ತಡೆದು ನಿಲ್ಲಿಸಿ, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಮಂಡ್ಯ, ಮೈಸೂರು, ಕೊಪ್ಪಳ, ಹಾವೇರಿಯಲ್ಲಿ ಪ್ರತಿಭಟನಾನಿರತ ಹೋರಾಟಗಾರರು ವಿನೂತನ ರೀತಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
CSK-RCB ಮಧ್ಯೆ ಇದೊಂದೇ ದೊಡ್ಡ ವ್ಯತ್ಯಾಸ! 5 ಬಾರಿ ಚಾಂಪಿಯನ್ಸ್ ಬಗ್ಗೆ ಮಾಜಿ ಕ್ರಿಕೆಟಿಗ ಗುಣಗಾನ | IPL 2025