ಬಿಜೆಪಿ ಕಾರ್ಯಕರ್ತ ಎನ್ನಲು ಹೆಮ್ಮೆ; ಆರ್.ಎಸ್. ಪಾಟೀಲ ಕುಚಬಾಳ

ವಿಜಯಪುರ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಎಂದು ಹೇಳಿಕೊಳ್ಳುವುದೇ ಒಂದು ಹೆಮ್ಮೆ. ಬಿಜೆಪಿಯಲ್ಲಿ ಸೇವೆ ಮಾಡುವವರು ದೇಶ ಸೇವೆಯ ಭಾವನೆ ಹೊಂದುತ್ತಾರೆಂದು ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು. ನಗರದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ರಾಷ್ಟ್ರೀಯತೆಯನ್ನೇ ಧ್ಯೇಯವಾಗಿಸಿಕೊಂಡಿದೆ. ಇಲ್ಲಿರುವ ಪ್ರತಿಯೊಬ್ಬರೂ ದೇಶಾಭಿಮಾನವನ್ನೇ ಉಸಿರಾಡುತ್ತಿದ್ದಾರೆ. ಹೀಗಾಗಿ ಪಕ್ಷ ಸೇರ್ಪಡೆಗೊಳ್ಳುವವರ ಸಂಖ್ಯೆ ಹೆಚ್ಚಾಗಿದೆ ಎಂದರು. ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ನೂತನ ಜಿಲ್ಲಾ ಉಪಾಧ್ಯಕ್ಷ … Continue reading ಬಿಜೆಪಿ ಕಾರ್ಯಕರ್ತ ಎನ್ನಲು ಹೆಮ್ಮೆ; ಆರ್.ಎಸ್. ಪಾಟೀಲ ಕುಚಬಾಳ