ನಿಗದಿತ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸಿ

blank

ಹೊಳೆನರಸೀಪುರ: ಪಟ್ಟಣದಿಂದ ನಿತ್ಯ ಓಡಾಡುವವರಿಗೆ ನಿಗದಿತ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸುವಂತೆ ಕೆಲ ಕಾರ್ಮಿಕರು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಪತ್ರ ನೀಡಿದರು.

ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಮಾತನಾಡಿ, ನಿತ್ಯ ನೂರಾರು ಜನರು ಪಟ್ಟಣ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಿಂದ ಹಾಸನದ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆ ಹಾಗೂ ಗಾರ್ಮೆಟ್ಸ್ ಕೆಲಸದ ನಿಮಿತ್ತ ಓಡಾಡುತ್ತಿದ್ದಾರೆ. ಆದರೆ ಬೆಳಗ್ಗೆ 7ರ ನಂತರ 10 ಗಂಟೆಯವರೆಗೂ ಬಸ್‌ಗಳ ಸಂಚಾರ ವಿರಳವಾಗಿದೆ. ಅದರಲ್ಲೂ ಕೈಗಾರಿಕಾ ಪ್ರದೇಶದಲ್ಲಿ ನಿಲುಗಡೆಗೊಳಿಸುವ ಶೆಟಲ್ ಬಸ್ ಸೌಲಭ್ಯ ಇಲ್ಲ. ಇದರಿಂದಾಗಿ ಪ್ರಯಾಣಿಕರ ಅನುಕೂಲತೆಗಾಗಿ ಬೆಳಗ್ಗೆ 8 ಗಂಟೆ ಸಮಯದಲ್ಲಿ ಹೆಚ್ಚುವರಿಯಾಗಿ ಒಂದು ಬಸ್ ಹಾಕಬೇಕೆಂದು ಕೋರಿದರು.

 

 

 

Share This Article

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…

ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem

Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…