ಪತ್ನಿ ಕೊಲೆ ಆರೋಪದಡಿ ಬಂಧನ; ಪಿಎಸ್‌ಐಗೆ ಜಾಮೀನು ನಿರಾಕರಣೆ

ಬೆಂಗಳೂರು : ಬೆಂಗಳೂರು: ಜಾಮೀನು ನೀಡಿದರೆ ಸಾಕ್ಷ್ಯ ತಿರುಚುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತ್ನಿ ಕೊಲೆ ಆರೋಪದಡಿ ಬಂಧಿತನಾಗಿರುವ ಪಿಎಸ್‌ಐಗೆ ಜಾಮೀನು ನೀಡಲು ನಿರಾಕರಿಸಿದೆ. ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠ ಈ ಆದೇಶ ಮಾಡಿದೆ. ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವು ಸಂಭವಿಸಿದ್ದು, ಚಾರ್ಜ್‌ಶೀಟ್ ಪ್ರಕಾರ ಆರೋಪಿಯು ಮೃತರನ್ನು ದೈಹಿಕ ಮತ್ತು ಮಾನಸಿಕ ಹಿಂಸೆಗೆ ಒಳಪಡಿಸಿರುವ ಅಂಶ ಕಂಡುಬರುತ್ತದೆ. ದೂರು ಪರಿಶೀಲಿಸಿದಾಗ ಮೃತರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಆರೋಪಿಗಳು ದೂರುದಾರರಿಗೆ … Continue reading ಪತ್ನಿ ಕೊಲೆ ಆರೋಪದಡಿ ಬಂಧನ; ಪಿಎಸ್‌ಐಗೆ ಜಾಮೀನು ನಿರಾಕರಣೆ