ತುಮಕೂರು: ಶನಿವಾರ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಈ ವೇಳೆ ಅಲ್ಲಿದ್ದ ಪೊಲೀಸ್ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು ತಮ್ಮ ಅಳಲನ್ನು ತೋಡಿಕೊಂಡರು.
ಮಠಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು ಸಿದ್ಧಲಿಂಗಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ನಂತರ ಅಲ್ಲಿಂದ ಹೊರಬರುವಾಗ ಪೊಲೀಸ್ ಆಕಾಂಕ್ಷಿಗಳು ವಿಜಯೇಂದ್ರರ ಕಾಲಿಗೆ ಬಿದ್ದು, ಪೊಲೀಸ್ ಪೇದೆಯ ವಯೋಮಿತಿಯನ್ನು 25 ರಿಂದ 27 ಹಾಗೂ 27ರಿಂದ 29 ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ ಅವರು ಈ ವಿಚಾರವನ್ನು ಸಿಎಂ ಗಮನಕ್ಕೆ ತಂದು ಆಕಾಂಕ್ಷಿಗಳ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ.