ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಹಗರಣ ಪ್ರಕರಣ ಸಂಬಂಧ ಕಳೆದ ಶುಕ್ರವಾರ ಸಿಐಡಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಆರೋಪಿ ಶ್ರೀಧರ್ ಮನೆಯಲ್ಲಿ ಒಂದೂವರೆ ಕೋಟಿ ರೂಪಾಯಿ ನಗದು ಸಿಕ್ಕಿದೆ!
ನೇಮಕಾತಿ ವಿಭಾಗದ AHC ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್, ಡಿವೈಎಸ್ಪಿ ಶಾಂತಕುಮಾರ್ ಅಣತಿಯಂತೆ ಕೆಲಸ ಮಾಡಿದ್ದ. ಈ ಪ್ರಕರಣದ ಬೆನ್ನುಹತ್ತಿದ ಸಿಐಡಿ, ಶ್ರೀಧರ್ ಮನೆ ಮೇಲೆ ದಾಳಿ ನಡೆಸಿತ್ತು. ದಾಳಿಯ ದಿನ 16 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಂದು ಮನೆಯ ಮೇಲೆ ದಾಳಿ ನಡೆಸಿದಾಗ ಶ್ರೀಧರ್ನ ಕೋಣೆಯಲ್ಲಿ 1.55 ಕೋಟಿ ರೂ. ನಗದು ಪತ್ತೆಯಾಗಿದೆ.