ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿ 26 ಮಂದಿಗೆ ಇಂದು ಷರತ್ತುಬದ್ಧ ಜಾಮೀನು ಮಂಜೂರಾಗಿದೆ.
ಕಿಂಗ್ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಜನರಿಗೆ ಜಾಮೀನು ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ.ಪಾಟೀಲ್ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಜಾಮೀನು ಪಡೆದವರ ಈ ಪೈಕಿ ಐವರು ಪರೀಕ್ಷಾ ಮೇಲ್ವಿಚಾರಕರು, 8 ಮಂದಿ ಅಭ್ಯರ್ಥಿಗಳು, 13 ಮಂದಿ ಕಿಂಗ್ಪಿನ್ ಮತ್ತು ಮಧ್ಯವರ್ತಿಗಳು.
ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಹಾಗರಗಿಗೆ ಕಳೆದ ಸೆ.27ರಂದು ಕಲಬುರಗಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿದ್ದ ದಿವ್ಯಾ ಹಾಗರಗಿ, ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾರ್ಯದರ್ಶಿ ಕೂಡ. ರಾಜೇಶ್ ಈ ಶಾಲೆಯ ಅಧ್ಯಕ್ಷ. ಕಲಬುರಗಿ ಜ್ಞಾನಜ್ಯೋತಿ ಶಾಲೆ ಕೇಂದ್ರದಲ್ಲಿ ಪಿಎಸ್ಐ ಪರೀಕ್ಷೆ ಬರೆದ ಬಹುತೇಕರು ಆಯ್ಕೆಯಾಗಿದ್ದರು. ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು.(ಕಲಬುರಗಿ, ದಿಗ್ವಿಜಯ ನ್ಯೂಸ್)
ಯಶವಂತಪುರ ರೈಲು ನಿಲ್ದಾಣದಲ್ಲಿ ಡ್ರಮ್ನಿಂದ ದುರ್ವಾಸನೆ… ತೆರೆದು ನೋಡಿದ್ರೆ ಅಪರಿಚಿತ ಯುವತಿಯ ಶವ!
18 ಸಾವಿರ ಮಂದಿಯನ್ನ ಕೆಲಸದಿಂದ ವಜಾ ಮಾಡುವುದಾಗಿ ಅಮೆಜಾನ್ ಘೋಷಣೆ! ಉದ್ಯೋಗಿಗಳಲ್ಲಿ ಆತಂಕ