ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಪ್ರಕರಣ ಮತ್ತಷ್ಟು ಸಂಕೀರ್ಣವಾಗುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ, ಈ ಪ್ರಕರಣದ ಆರೋಪಿಯೊಬ್ಬರು ಜಾಮೀನಿನ ಮೇಲೆ ಹೊರಬಂದು ನಾಪತ್ತೆಯಾಗಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಆರ್.ಡಿ.ಪಾಟೀಲ್ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಆದರೆ ಈಗ ಈತ ನಾಪತ್ತೆಯಾಗಿದ್ದು, ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುವಂತಾಗಿದೆ.
ರಾಮಮೂರ್ತಿನಗರದ ಹಾಗೂ ತುಮಕೂರಿನ ಕ್ಯಾತ್ಸಂದ್ರದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್.ಡಿ.ಪಾಟೀಲ್ ದಸ್ತಗಿರಿಗಾಗಿ ನ್ಯಾಯಾಲಯ ವಾರಂಟ್ ಹೊರಡಿಸಿದೆ. ಆದರೆ ಜಾಮೀನಿನ ಮೇಲೆ ಹೊರಗಿರುವ ಈತ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿರುವುದಷ್ಟೇ ಅಲ್ಲದೆ, ಸಿಐಡಿ ಪೊಲೀಸರು ಸಾರ್ವಜನಿಕ ಪ್ರಕಟಣೆಯನ್ನೂ ಹೊರಡಿಸಿದ್ದಾರೆ.
ಮಕ್ಕಳಾಗಲಿ ಎಂದು ಮಹಿಳೆಗೆ ಮನೆಯವರೇ ಮನುಷ್ಯರ ಎಲುಬಿನ ಪುಡಿ ತಿನ್ನಿಸಿದ್ರು!