ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ಪಿನ್ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಶರಣಾಗಿದ್ದಾನೆ. ಈ ಮೂಲಕ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದಂತಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಿಂಗ್ಪಿನ್ ಆಗಿರುವ ಆರ್.ಡಿ. ಪಾಟೀಲ್ ಇಂದು ಕಲಬುರಗಿ ಜಿಲ್ಲಾ ನ್ಯಾಯಲಯಕ್ಕೆ ಹಾಜರಾಗಿ ಶರಣಾಗಿದ್ದಾನೆ. ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಗೆ ಆಗಮಿಸಲಿದ್ದು, ಅದಕ್ಕೂ ಒಂದು ದಿನ ಮುನ್ನವೇ ಈತ ಶರಣಾಗಿದ್ದಾನೆ.
ಸಿಐಡಿ ಅಧಿಕಾರಿಗಳನ್ನ ತಳ್ಳಿ ಓಡಿ ಹೋಗಿದ್ದ ಆರ್.ಡಿ.ಪಾಟೀಲ್ ತಲೆಮರೆಸಿಕೊಂಡಿದ್ದು, ಬಳಿಕ ಫೇಸ್ಬುಕ್ ಮೂಲಕ ಕಾಣಿಸಿಕೊಂಡಿದ್ದ. ಅಫಜಲಪುರದಲ್ಲಿ ಕಟೌಟ್ ಬ್ಯಾನರ್ಗಳಲ್ಲೂ ಮಿಂಚುತ್ತಿದ್ದ ಆರ್.ಡಿ. ಪಾಟೀಲ್ ಶರಣಾಗತಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲ ಕೆರಳಿಸಿದೆ.
ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್ದಾರರ ಪರದಾಟ
ದೇವರ ಹುಂಡಿಯಲ್ಲಿ ಸಿಕ್ಕಿತು ವಿಕೃತ ಕೋರಿಕೆಯ ಹರಕೆ ಚೀಟಿ; ನರಳಿ ನರಳಿ ಸಾಯಲಿ ಎಂದು ಬೇಡಿಕೆ!