More

    ನ್ಯಾಯಾಲಯಕ್ಕೆ ಶರಣಾದ ಪಿಎಸ್​​ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್​ಪಿನ್​

    ಕಲಬುರಗಿ: ಪೊಲೀಸ್​ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್​ಪಿನ್ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಶರಣಾಗಿದ್ದಾನೆ. ಈ ಮೂಲಕ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದಂತಾಗಿದೆ.

    ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕಿಂಗ್​ಪಿನ್ ಆಗಿರುವ ಆರ್​.ಡಿ. ಪಾಟೀಲ್ ಇಂದು ಕಲಬುರಗಿ ಜಿಲ್ಲಾ ನ್ಯಾಯಲಯಕ್ಕೆ ಹಾಜರಾಗಿ ಶರಣಾಗಿದ್ದಾನೆ. ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಬುರಗಿಗೆ ಆಗಮಿಸಲಿದ್ದು, ಅದಕ್ಕೂ ಒಂದು ದಿನ ಮುನ್ನವೇ ಈತ ಶರಣಾಗಿದ್ದಾನೆ.

    ಸಿಐಡಿ ಅಧಿಕಾರಿಗಳನ್ನ ತಳ್ಳಿ ಓಡಿ ಹೋಗಿದ್ದ ಆರ್.ಡಿ.ಪಾಟೀಲ್ ತಲೆಮರೆಸಿಕೊಂಡಿದ್ದು, ಬಳಿಕ ಫೇಸ್​ಬುಕ್​ ಮೂಲಕ ಕಾಣಿಸಿಕೊಂಡಿದ್ದ. ಅಫಜಲಪುರದಲ್ಲಿ ಕಟೌಟ್ ಬ್ಯಾನರ್​ಗಳಲ್ಲೂ ಮಿಂಚುತ್ತಿದ್ದ ಆರ್.ಡಿ. ಪಾಟೀಲ್ ಶರಣಾಗತಿ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕುತೂಹಲ ಕೆರಳಿಸಿದೆ.

    ಅನ್ನಭಾಗ್ಯಕ್ಕೆ ಮತ್ತೆ ವಕ್ಕರಿಸಿದ ಸರ್ವರ್ ಭೂತ: ಪಡಿತರ ಪಡೆಯಲು ಕಾರ್ಡ್‌ದಾರರ ಪರದಾಟ

    ದೇವರ ಹುಂಡಿಯಲ್ಲಿ ಸಿಕ್ಕಿತು ವಿಕೃತ ಕೋರಿಕೆಯ ಹರಕೆ ಚೀಟಿ; ನರಳಿ ನರಳಿ ಸಾಯಲಿ ಎಂದು ಬೇಡಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts