More

    ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋಖೋ ಪಂದ್ಯಾವಳಿ: ಮಂಡ್ಯ, ಮೈಸೂರು ತಂಡ ಚಾಂಪಿಯನ್

    ವಿಜಯಪುರ: ನಗರದ ಬಿಎಲ್‌ಡಿಇ ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯ ಫೈನಲ್‌ನಲ್ಲಿ ಬಾಲಕಿಯರ ವಿಭಾಗದಲ್ಲಿ ಮಂಡ್ಯ ಹಾಗೂ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ಟ್ರೋಫಿ ಗೆದ್ದಿತು.

    ಬಾಲಕಿಯರ ವಿಭಾಗದಲ್ಲಿ ಮಂಡ್ಯ ತಂಡ ಮೈಸೂರು ತಂಡವನ್ನು 11-13 ಅಂಕಗಳ ಅಂತರದಿಂದ ಸೋಲಿಸಿ ಪ್ರಥಮ ಸ್ಥಾನ ಪಡೆದರೆ ಬಾಲಕರ ವಿಭಾಗದಲ್ಲಿ ಮೈಸೂರು ತಂಡ ದಾವಣಗೆರೆ ತಂಡವನ್ನು 14-13 ಅಂಕಗಳಿಂದ ಸೋಲಿಸಿ ಚಾಂಪಿಯನ್ ಎನಿಸಿಕೊಂಡಿತು.

    ಟ್ರೋಫಿ ಗೆದ್ದ ತಂಡಕ್ಕೆ 15 ಸಾವಿರ ರೂ. ನಗದು ಬಹುಮಾನ ಹಾಗೂ ರನ್ನರ್‌ಅಪ್ ಪಡೆದ ತಂಡಗಳಿಗೆ 10 ಸಾವಿರ ರೂ. ನಗದು ಮತ್ತು ಟ್ರೋಫಿ ವಿತರಿಸಲಾಯಿತು.

    ಸಮಾರೋಪದಲ್ಲಿ ಪಾಲ್ಗೊಂಡಿದ್ದ ಯುವ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿ, ರಾಜ್ಯ ಸರ್ಕಾರ ದೈಹಿಕ ಶಿಕ್ಷಕರ ಕೊರತೆಯನ್ನು ನೀಗಿಸಿ ಮಕ್ಕಳನ್ನು ಸದೃಢರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ಭಾರತದ ಭವಿಷ್ಯದ ನಾಗರಿಕರಾಗಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನೀಡಲು ಶಿಕ್ಷಕರ ಕೊರತೆ ಇದೆ. ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಶಿಕ್ಷಕರ ಕೊರತೆ ಸೇರಿದಂತೆ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

    ವಿದ್ಯಾರ್ಥಿಗಳ ಜೀವನದಲ್ಲಿ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ದೈಹಿಕ ಶಿಕ್ಷಕರು ಮಾರ್ಗದರ್ಶಕರಾಗಿ ಜೀವ ತುಂಬುತ್ತಾರೆ. ಪ್ರತಿಯೊಂದು ಶಿಕ್ಷಣ ಸಂಸ್ಥೆಯ ಆತ್ಮದಂತೆ ಕೆಲಸ ಮಾಡುತ್ತಾರೆ. ಹೀಗಾಗಿ ದೈಹಿಕ ಶಿಕ್ಷಣ ಶಿಕ್ಷಕರು ಸದೃಢ ರಾಷ್ಟ್ರ ನಿರ್ಮಾಣದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

    ಬಿಎಲ್‌ಡಿಇ ಸಂಸ್ಥೆಯ ಆಡಳಿತಾಧಿಕಾರಿ ಬಿ.ಆರ್.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯೆಯ ಜತೆಗೆ ಕ್ರೀಡೆಯೂ ಬಹುಮುಖ್ಯವಾಗಿದೆ. ಎರಡನ್ನೂ ವಿದ್ಯಾರ್ಥಿಗಳು ಶ್ರದ್ಧೆಯಿಂದ ಮಾಡಿದರೆ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು.

    ಬಿಎಲ್‌ಡಿಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಆರ್.ಕೊಟ್ನಾಳ, ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ, ಬಿ.ಆರ್.ಪಾಟೀಲ, ದೈಹಿಕ ನಿರ್ದೇಶಕ ಎಸ್.ಎಸ್.ಕೋರಿ, ದೈಹಿಕ ಸಹಾಯಕ ನಿರ್ದೇಶಕ ಕೈಲಾಸ ಹಿರೇಮಠ, ಬಿಎಲ್‌ಡಿಇ ಸಂಸ್ಥೆಯ ಕಚೆೇರಿ ಅಧೀಕ್ಷಕ ಎಸ್.ಎ.ಬಿರಾದಾರ, ಪಿಯು ಇಲಾಖೆ ಉಪ ನಿರ್ದೇಶಕ ಎಸ್.ಎನ್.ಬಗಲಿ, ಪ್ರಾಚಾರ್ಯ ಸಿ.ಬಿ.ಪಾಟೀಲ, ಡಾ.ಜಿ.ಡಿ.ಅಕಮಂಚಿ, ಎಲ್.ಬಿ.ಪಾಟೀಲ, ಸಂತೋಷ ಲೋಕುರಿ, ಮಧುಸೂದನ ಮಾಗಿ, ವಿ.ಟಿ.ಗೊಂಬಿ, ಎಸ್.ಬಿ.ಗೋಗಿ, ವಿ.ಎಸ್.ಹಂಜಿ, ಎಸ್.ಆರ್.ಮುತ್ತಗಿ ಮುಂತಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts