ಅಂಗನವಾಡಿಗಳ ಮೂಲಕ ಜನಜಾಗೃತಿ

blank

ನರಗುಂದ: ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆಯಡಿ ತಾಲೂಕಿನ ಶಿರೋಳ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಿಂದ ಮಂಗಳವಾರ ಪೋಷಣ ಪಕ್ವಾಡ ಕಾರ್ಯಕ್ರಮ ಜರುಗಿತು.

ಪೋಷಣ ಅಭಿಯಾನ ಕಾರ್ಯಕ್ರಮ ಸಂಯೋಜಕ ಮಂಜುನಾಥ ಗುಗ್ಗರಿ ಮಾತನಾಡಿ, ಪೋಷಣ ಪಕ್ವಾಡ 15 ದಿನಗಳ ಕಾಲ ಜರುಗುವ ಕಾರ್ಯಕ್ರಮವಾಗಿದ್ದು, ಈ ವರ್ಷ ವಿಶೇಷವಾಗಿ ಮೊದಲ 1000 ದಿನಗಳನ್ನು ಆರೈಕೆ, ಮಕ್ಕಳಲ್ಲಿ ಆರೋಗ್ಯಕರ ಜೀವನ ಶೈಲಿ ಹಾಗೂ ಪೋಷಣ ಟ್ರ್ಯಾಕರ್ ಆಪ್​ಗಳಲ್ಲಿ ಫಲಾನುಭವಿಗಳ ಸ್ವಯಂ ನೋಂದಣಿ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಪರಿಮಳ ಹೂಗಾರ ಮಾತನಾಡಿ, ಅಂಗನವಾಡಿಗಳ ಮೂಲಕ ಸುಸ್ಥಿರ ಆಹಾರ ವ್ಯವಸ್ಥೆ, ರಕ್ತಹೀನತೆ ಮತ್ತು ಆರೋಗ್ಯಕರ ಜೀವನಶೈಲಿ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಶಿರೋಳ ಗ್ರಾಪಂ ಸದಸ್ಯೆ ಕೌಸರಭಾನು ಮುಲ್ಲಾ ಕಾರ್ಯಕ್ರಮ ಉದ್ಘಾಟಿಸಿದರು. ಪಿಡಿಒ ವೈ.ಬಿ. ಸಂಕನಗೌಡ್ರ, ಅಂಗನವಾಡಿ ಕಾರ್ಯಕರ್ತೆಯರಾದ ಎಸ್.ಜೆ. ಬಾಗಲಕೋಟ, ಎಸ್.ವಿ. ಜಿಗಳೂರ, ಎಸ್.ವಿ. ಪಾಟೀಲ, ಎಸ್.ಜಿ. ಕುಪ್ಪಸ್ತ, ವಿ.ಎಸ್. ಹಂಚಿನಮನಿ, ಎಂ.ವೈ. ಬನ್ನಿಗಿಡದ, ಎಸ್.ವಿ. ಕುಪ್ಪಸ್ತ, ಎನ್.ಎಂ. ಕಣಕೇರಿ, ಎಸ್.ಎಂ. ಕಿತ್ತಲಿ, ಐ.ಎಸ್. ಮಂಟೂರಮಠ, ವಿ.ಎಸ್. ಗಿರಿಯಪ್ಪಗೌಡ್ರ, ಜಿ.ಎಲ್. ಮರ್ಚಣ್ಣವರ, ಇತರರಿದ್ದರು.

blank

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…