ವಿಜಯನಗರ: ರಾಜ್ಯಾದ್ಯಂತ ಕರೊನಾ ಪ್ರಕರಣ ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಎಲ್ಲವೂ ನಿಧಾನವಾಗಿ ಸಹಜಸ್ಥಿತಿಗೆ ಬರುತ್ತಿದೆ ಎಂದು ಸಾರ್ವಜನಿಕರು ನಿರಾಳರಾಗುತ್ತಿದ್ದಾರೆ. ಆದರೆ ಈ ನಡುವೆ ಕೊಟ್ಟೂರೇಶ್ವರ ಭಕ್ತಾದಿಗಳಿಗೆ ಬೇಸರ ಮೂಡಿಸುವ ಸಂಗತಿಯೊಂದು ಹೊರಬಿದ್ದಿದೆ.
ವಿಜಯನಗರ ಜಿಲ್ಲೆಯ ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವದಲ್ಲಿ ಪ್ರತಿವರ್ಷ ಲಕ್ಷಾಂತರ ಜನ ಪಾಲ್ಗೊಳ್ಳುವ ಮೂಲಕ ಅದ್ಧೂರಿಯಾಗಿ ನಡೆಯುತ್ತದೆ. ಊರ-ಪರವೂರಿನ ಮಾತ್ರವಲ್ಲದೆ ನೆರೆರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಈ ಸಲ ಕರೊನಾ ಸೋಂಕು ಹಬ್ಬುವ ಭೀತಿಯಿಂದ ಈ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಫೆ.23ರಿಂದ ಫೆ.26ರವರೆಗೆ ಈ ಸಲ ಕೊಟ್ಟೂರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಪ್ರತಿವರ್ಷ ಇದರಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಇಷ್ಟೊಂದು ಭಕ್ತರು ಆಗಮಿಸುವಾಗ ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟ. ಇದರಿಂದ ಸೋಂಕು ಮತ್ತೆ ವ್ಯಾಪಿಸುವ ಸಾಧ್ಯತೆ ಅಧಿಕವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬಾರದು ಎಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಆದೇಶ ಹೊರಡಿಸಿದ್ದಾರೆ.
ಪಕ್ಕದ ಮನೆಯವಳನ್ನು ಮಚ್ಚಿನಿಂದ ಹೊಡೆದು ಕೊಂದ; ಇನ್ನೊಬ್ಬಾಕೆಯ ಸ್ಥಿತಿ ಚಿಂತಾಜನಕ