More

    ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ

    ಹುಲ್ಲಹಳ್ಳಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲು ಜನಸಂಪರ್ಕ ಸಭೆ ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

    ಸಮೀಪದ ದುಗ್ಗಹಳ್ಳಿಯಲ್ಲಿ ಜನಸಂಪರ್ಕ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದು, ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ನನ್ನ ತಂದೆ ದಿ.ಧ್ರುವನಾರಾಯಣ್ ಅವರು ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಬಹಳ ಕನಸು ಕಂಡಿದ್ದರು. ಅವರ ಕನಸು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

    ಗ್ರಾಪಂ ಅಧ್ಯಕ್ಷ ಶಿವನಾಗಪ್ಪ ಮಾತನಾಡಿ, ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಜನತೆ ಭಯ ಭೀತರಾಗಿದ್ದಾರೆ. ಜಲಜೀವನ್ ಯೋಜನೆಗಾಗಿ ರಸ್ತೆಗಳನ್ನು ಹಾಳು ಮಾಡಲಾಗುತ್ತಿದೆ ಎಂದು ದೂರಿದರು.

    ಶಾಸಕರು ದುಗ್ಗಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾರ್ಯ , ಮಾದಾಪುರ, ಎಂ.ಕೊಂಗಳ್ಳಿ, ಶೆಟ್ಟಹಳ್ಳಿ, ಕಗ್ಗಲೂರು, ಯಾಲಹಳ್ಳಿ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿದರು. ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಪಂ ಉಪಾಧ್ಯಕ್ಷೆ ಪದ್ಮಾ, ಸದಸ್ಯೆ ಸುಮಲಾಂಬಿಕಾ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠನಾಯಕ, ತಹಸೀಲ್ದಾರ್ ಶಿವಕುಮಾರ್, ತಾ.ಪಂ. ಇಒ ರಾಜೇಶ್, ಉಪ ತಹಸೀಲ್ದಾರ್ ಶಿವಕುಮಾರ್, ಪಿಡಿಒ ಜ್ಯೋತಿ ಹಾಗೂ ತಾಲೂಕು ಆಡಳಿ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts