ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ಕೊಟ್ಟ ಪುನೀತ್

ಕರೊನಾ ವೈರಸ್‌ನಿಂದ ಇಡೀ ದೇಶವೇ ಲಾಕೌಟ್ ಆಗಿದೆ. ಇದರಿಂದ ಸಾಕಷ್ಟು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಜನರ ಸಂಕಷ್ಟಗಳನ್ನು ತೀರಿಸುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ನಿಧಿ ಸ್ಥಾಪಿಸಿದ್ದು, ಈಗಾಗಲೇ ಹಲವರು ಆ ಪರಿಹಾರ ನಿಧಿಗೆ ತಮ್ಮದೇ ರೀತಿಯಲ್ಲಿ ದೇಣಿಗೆ ಕೊಟ್ಟಿದ್ದಾರೆ. ಈ ಸಾಲಿಗೆ ಇದೀಗ ನಟ ಪುನೀತ್ ರಾಜಕುಮಾರ್ ಸಹ ಸೇರಿದ್ದಾರೆ. ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಪುನೀತ್, 50 ಲಕ್ಷದ ಚೆಕ್ ಕೊಟ್ಟಿದ್ದಾರೆ. ಆ ಹಣವನ್ನು ಕಷ್ಟದಲ್ಲಿರುವವರ ನೆರವಿಗೆ ಬಳಸಿಕೊಳ್ಳಬೇಕೆಂದು … Continue reading ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ಕೊಟ್ಟ ಪುನೀತ್