More

    ಅಪ್ಪು ನೆನಪಿಗೆ ಬಡವರಿಗೆ ಸಹಾಯ ಮಾಡಿ: ಅಭಿಮಾನಿ ಬಳಗದ ಮುಖ್ಯಸ್ಥ ಕೆ.ಎಸ್.ಗುರುರಾಜ್ ಕರೆ

    ಮಂಡ್ಯ: ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳು ಅವರ ಮೇಲಿನ ಅಭಿಮಾನವನ್ನು ಸಮಾಜ ಸೇವೆ ಮಾಡುವುದರ ಮೂಲಕ ತೋರಿಸಬೇಕು. ಬಡಜನರಿಗೆ ಸಹಾಯ ಮಾಡಿದರೆ ಸಾರ್ಥಕತೆ ಬರುತ್ತದೆ ಎಂದು ಅಪ್ಪು ಅಭಿಮಾನಿ ಬಳಗದ ಮುಖ್ಯಸ್ಥ ಕೆ.ಎಸ್.ಗುರುರಾಜ್ ಕಿರಗಂದೂರು ಹೇಳಿದರು.
    ನಗರದ ಕಾರಾಗೃಹ ವೃತ್ತದ ಅಪ್ಪು ಬಿರಿಯಾನಿ ಪಾರ್ಟಿ ಹಾಲ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನೋತ್ಸವದ ಅಂಗವಾಗಿ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಬಳಗ, ಜಿಲ್ಲಾ ರಕ್ತನಿಧಿ ಕೇಂದ್ರ, ಅಪ್ಪು ಬಿರಿಯಾನಿ ಸೆಂಟರ್ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಹಾಗೂ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿ ವರ್ಷ ಪುನೀತ್ ರಾಜ್‌ಕುಮಾರ್ ಅವರ ಹೆಸರಿನಲ್ಲಿ ರಕ್ತದಾನ, ಆರೋಗ್ಯ ಶಿಬಿರದಂತಹ ಜನಪಯೋಗಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು, ಇದನ್ನು ಹೀಗೆ ಮುಂದುವರಿಸುತ್ತೇವೆ ಎಂದರು.
    ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ಪುನೀತ್ ರಾಜ್‌ಕುಮಾರ್ ಕನ್ನಡದ ಆಸ್ತಿ. ಅವರ ಸಿನಿಮಾಗಳು ಸದಾಭಿರುಚಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ನಾಂದಿ ಹಾಡಿವೆ. ಅಪ್ಪು ಸಾಧನೆಯ ಬದುಕು ಸಮಾಜಮುಖಿಯಾಗಿದ್ದು, ಜೀವನ ಸಾರ್ಥಕತೆಯನ್ನು ಕಂಡಿದೆ ಎಂದು ಶ್ಲಾಘಿಸಿದರು.
    ಅಭಿಮಾನಿ ಬಳಗದ ಪ್ರದೀಪ್, ಪ್ರಸನ್ನ, ನಿಶಾಂತ್, ಚಿರಂತ್, ತವನ್, ಶಿವರಾಜ್ ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜು, ಹಿಂದುಳಿದ ವರ್ಗಗಳ ಮುಖಂಡರಾದ ಯಲಿಯೂರು ಪ್ರದೀಪ್, ಸತೀಶ್ ಗುಡಿಗೇನಹಳ್ಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts