ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಂಗ್ರಹಣೀಯ ಶಿಲ್ಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಈ ಕಾರ್ಯಕ್ರಮ ನಡೆಯಿತು.
ಅಪ್ಪು ಪತ್ನಿ ಅಶ್ವಿನಿ, ಪುತ್ರಿ ಹಾಗೂ ಡಾ.ರಾಜ್ ಕುಟುಂಬದ ಸದಸ್ಯರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪುನೀತ್ ರಾಜ್ಕುಮಾರ್ ಅವರ ಸಂಗ್ರಹಣೀಯ ಶಿಲ್ಪವನ್ನು ಅನಾವರಣಗೊಳಿಸಿದರು.
ಇದನ್ನೂ ಓದಿ: ‘ಶಕ್ತಿ’ ಯೋಜನೆಯಲ್ಲೂ ಭ್ರಷ್ಟಾಚಾರ?: ವಿಡಿಯೋದಲ್ಲಿ ಸೆರೆಯಾಯ್ತು ಆ ದೃಶ್ಯ!
ಪುನೀತ್ ರಾಜಕುಮಾರ್ ಅವರು ಅವರ ತಂದೆಗಿಂತಲೂ ಜನಪ್ರಿಯರಾಗಿದ್ದರು. ಅವರು ಇಂದು ಬದುಕಿದ್ದಿದ್ದರೆ ಇನ್ನೂ ಹೆಚ್ಚು ಒಳ್ಳೆಯ ಕೆಲಸಗಳನ್ನು ಮಾಡಿರುತ್ತಿದ್ದರು. ಅವರು ವಿಧಿವಶರಾದಾಗ ಇಡೀ ದೇಶವೇ ಕಣ್ಣೀರು ಹಾಕಿತ್ತು ಎಂದ ಸಿದ್ದರಾಮಯ್ಯ, ಅವರು ನಮ್ಮನ್ನು ಬಹಳ ಬೇಗ ಬಿಟ್ಟು ಹೋದರು ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?
ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಡಾ.ರಾಜ್ ಕುಟುಂಬದ ಇತರ ಸದಸ್ಯರು, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪುನೀತ್ ರಾಜಕುಮಾರ್ ಅವರ ಸಂಗ್ರಹಣೀಯ ಶಿಲ್ಪವನ್ನು ಅನಾವರಣಗೊಳಿಸಿದರು.
ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬದ ಇತರ ಸದಸ್ಯರು, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ… pic.twitter.com/BXePLpHTDO— CM of Karnataka (@CMofKarnataka) October 16, 2023
ಐಸ್ ಕ್ರೀಮ್ ಟ್ರಕ್ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!