More

    ನಟಿ ಕಂಗನಾ ಕಾರನ್ನು ಘೇರಾವ್ ಮಾಡಿದ ರೈತರ ಗುಂಪು

    ಚಂಡೀಗಡ: ಪಂಜಾಬ್​ನ ಕೀರತ್​ಪುರದಲ್ಲಿ ರೈತ ನಾಯಕರು ಇಂದು ಬಾಲಿವುಡ್​ ನಟಿ ಕಂಗನಾ ರಣಾವತ್​ ಕಾರನ್ನು ಸುತ್ತುವರೆದು ಘೋಷಣೆಗಳನ್ನು ಕೂಗಿದರು. ಘೇರಾವ್​ ಮಾಡಿದ ದೊಡ್ಡ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರವುದಕ್ಕಾಗಿ ಪೊಲೀಸ್​ ಸಿಬ್ಬಂದಿ ಶ್ರಮಿಸಬೇಕಾಯಿತು ಎಂದು ವರದಿ ತಿಳಿಸಿದೆ.

    ಚಂಡೀಗಡ-ಉನ ಹೈವೇನಲ್ಲಿ ರೋಪರ್​ ನಗರದ ಬಂಗಾ ಸಾಹಿಬ್​, ಕೀರತ್​ಪುರ್​ ಸಾಹಿಬ್ ಬಳಿ ಈ ಘಟನೆ ನಡೆಯಿತು ಎಂದು ಕಂಗನಾ ಆರೋಪಿಸಿದ್ದಾರೆ. ಈ ಸಂದರ್ಭದ ಚಿತ್ರಗಳು ಜಾಲತಾಣದಲ್ಲಿ ವೈರಲ್​ ಆಗಿವೆ. ರೈತ ಮುಖಂಡ ರಾಕೇಶ್ ತಿಕಾಯತ್​ ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಘಟನೆಯ ವಿವರ ತಿಳಿದ ನಂತರವೇ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

    ಇದನ್ನೂ ಓದಿ: ಹೆಚ್ಚಿದ ಒಮಿಕ್ರಾನ್​ ಆತಂಕ: ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಜನ ನಾಪತ್ತೆ!

    ತಮ್ಮ ವಿವಾದಾತ್ಮಕ ಸೋಷಿಯಲ್ ಮೀಡಿಯ ಪೋಸ್ಟ್​ಗಳಿಗೆ ಹೆಸರಾಗಿರುವ ಕಂಗನಾ, ರೈತರ ಪ್ರತಿಭಟನೆಯ ಬಗ್ಗೆ ಮಾಡಿದ ಇನ್​ಸ್ಟಾಗ್ರಾಂ ಪೋಸ್ಟ್​ ಹಿನ್ನೆಲೆಯಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕಳೆದ ಮಂಗಳವಾರ ಎಫ್​ಐಆರ್​ ಸಲ್ಲಿಸಿದ್ದರು ಎಂದು ವರದಿ ತಿಳಿಸಿದೆ. (ಏಜೆನ್ಸೀಸ್)

    ಒಮಿಕ್ರಾನ್​​ ತಡೆಗೆ ಸರ್ಕಾರ ಸಜ್ಜು; ರಾಜ್ಯದಲ್ಲಿ ಜಾರಿಯಾಗುವ ಹೊಸ ನಿಯಮಗಳಿವು

    ಬರೋಬ್ಬರಿ 2.15 ಕೋಟಿ ರೂ. ಸಂಬಳ! ಐಐಟಿ ವಿದ್ಯಾರ್ಥಿಗೆ ಬಂಪರ್​ ಆಫರ್​​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts